BREAKING NEWS

ಅಶ್ವಥ್ ನಾರಾಯಣ ಅಲ್ಲ ನವರಂಗಿ ನಾರಾಯಣ : ಡಿ.ಕೆ ಶಿವಕುಮಾರ್

ಬೆಂಗಳೂರು : ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡಿಕೆಶಿ ಬೆಂಗಳೂರು ಅಭಿವೃದ್ಧಿ ಸಚಿವ ಅಲ್ಲ, ಬೆಂಗಳೂರು ನಿರ್ನಾಮ ಸಚಿವ ಎಂದು ಆರೋಪ ಮಾಡಿರುವ ಅಶ್ವಥ್ ನಾರಾಯಣ್ ವಿರುದ್ಧ ಕಿಡಿಕಾರಿದರು. ಅವನು ಅಶ್ವಥ್ ನಾರಾಯಣ್ ಅಲ್ಲ ಅವರು, ನವರಂಗಿ ನಾರಾಯಣ. ರಾಮನಗರಕ್ಕೆ ಬಂದು ಕ್ಲೀನ್ ಮಾಡ್ತೀನಿ ಎಂದೇಳಿ ಅವರ ಪಾರ್ಟಿ ಕ್ಲೀನ್ ಮಾಡಿ ಹೋದರು. ಅವರ ಇಲಾಖೆಯಲ್ಲಿ, ಬೆಂಗಳೂರು ನಗರದಲ್ಲಿ ಏನು ಮಾಡಿದ್ದಾರೆ ಎಂದು ನಾವು ಇನ್ನೂ ಬಿಚ್ಚಿಲ್ಲ. ಏನೇನು ಆಟ ಆಡ್ತಿದ್ದಾರೆ, ಯಾರನ್ನು ಎತ್ತಿ ಕಟ್ಟುತ್ತಿದ್ದಾರೆ ಎಲ್ಲ ಗೊತ್ತಿದೆ, ಎಲ್ಲಿಗೆ ಬೇಕಾದರೂ ಹೋಗಲಿ. ಸ್ವಾತಂತ್ರ್ಯ ದಿನಾಚರಣೆ ಆಗಲಿ ನಂತರ ಮಾತನಾಡುತ್ತೇನೆ ಎಂದರು.

ಕಳ್ಳರನ್ನು ರಕ್ಷಣೆ ಮಾಡುವುದರಲ್ಲಿ ಅಶ್ವಥ್ ನಾರಾಯಣ್ ಅವರಿಗೆ ಡಾಕ್ಟರೇಟ್ ಕೊಡಬೇಕು. ಆ ಮೆಂಟಲ್ ಟೆನ್ಷನ್‍ನಲ್ಲಿ ಇದ್ದಾರೆ. ಬೆಂಗಳೂರು ನಗರದಲ್ಲಿ, ಅವರ ಇಲಾಖೆಯಲ್ಲಿ ಏನು ಮಾಡಿದ್ರು ಅಂತ ಇನ್ನೂ ತೆಗೆದಿಲ್ಲ. ಟೈಮ್ ಬರುತ್ತೆ ಆಗ ಎಲ್ಲವೂ ಗೊತ್ತಾಗಲಿದೆ. ಕಂಪ್ಲೀಟ್ ಏನು ಮಾಡಿದ್ದರು, ಹೇಗೆ ಎತ್ತಿ ಕಟ್ಟಿದ್ದರು ಗೊತ್ತಾಗುತ್ತಿದೆ. ಕೆಲಸ ಯಾರು ಮಾಡಿದ್ದಾರೆ, ಯಾರು ನಿಜವಾಗಿ ಕೆಲಸ ಮಾಡಿದ್ದಾರೆ. ನಮ್ಮ ಸರ್ಕಾರ ತನಿಖೆ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಏನೆಲ್ಲಾ ಆಟ ಆಡುತ್ತಿದ್ದಾರೆ ಆಡಲಿ. ಮೊನ್ನೆಯೇ ಈ ಬಗ್ಗೆ ಮಾತನಾಡಬೇಕಿತ್ತು. ಆದರೆ ಬಿಬಿಎಂಪಿಯಲ್ಲಿ ಒಂದು ಆಕ್ಸಿಡೆಂಟ್ ಆಯ್ತು. ಇಂದೂ ಬೇಡ ಪಾರ್ಟಿ ಕೆಲಸ ಇದೆ. ಇಂಡಿಪೆಂಡೆನ್ಸ್ ಡೇ ಮುಗೀಲಿ ಮಾತನಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಪ್ರಾಮಾಣಿಕರಾಗಿದ್ದರೆ ಅಜ್ಜಯ್ಯನ ಮೇಲೆ ಆಣೆ ಮಾಡಲಿ ಎಂದಿದ್ದ ಸಿಟಿ ರವಿ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಸಿ.ಟಿ.ರವಿಗೂ ಟ್ರೀಟ್ ಮೆಂಟ್ ಬೇಕಾಗಿದೆ. ಟ್ರೀಟ್‍ಮೆಂಟ್ ಕೊಡೋಣ ಎಂದು ತಿಳಿಸಿದರು.

lokesh

Recent Posts

ಬಲಮುರಿ-ಎಡಮುರಿ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ನಿಷೇಧ ; ವ್ಯಾಪಾರಿಗಳ ಅಸಮಾಧಾನ

ಮಂಡ್ಯ : ಬೇಸಿಗೆ ರಜೆಯ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿ ಮತ್ತು ಎಡಮುರಿ ಪ್ರವಾಸಿ…

37 seconds ago

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

45 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

1 hour ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago