BREAKING NEWS

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಪಕ್ಷ 18 ರಿಂದ 20 ಕ್ಷೇತ್ರಗಳನ್ನು ಗೆಲ್ಲಬೇಕು: ಕಾಂಗ್ರೆಸ್ ವರಿಷ್ಠರ ಚರ್ಚೆ

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ ಉಪಸ್ಥಿತರಿದ್ದರು.

ರಾಜ್ಯದ ಜನತೆಗೆ ಸರಕಾರ ನೀಡಿರುವ ಐದು ಉಚಿತ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನವಾಗಬೇಕು. ಫಲಾನುಭವಿಗಳನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು. ಫಲಾನುಭವಿಗಳ ಸಭೆ ಅಥವಾ ಸಮಾವೇಶಗಳನ್ನು ಮಾಡುವಂತೆಯೂ ಕಾಂಗ್ರೆಸ್ ನಾಯಕರು ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವುದು ತಡ ಮಾಡಬಾರದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಪ್ರಕಟಿಸುವುದರಿಂದ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ರಾಜ್ಯ ನಾಯಕರು, ಎಐಸಿಸಿ ವರಿಷ್ಠರಿಗೆ ಕೋರಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು: ನಾವು ಜನಪರವಾಗಿದ್ದೇವೆ. ಜನರು ನಮ್ಮ ಪರವಾಗಿರುತ್ತಾರೆ. ಆದುದರಿಂದ, ಯಾವುದೆ ಕಾರಣಕ್ಕೂ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರದಂತೆ ಎಚ್ಚರಿಕೆ ವಹಿಸುವಂತೆ ಸಚಿವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದಿನ ಬಿಜೆಪಿ ಸರಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ಆದುದರಿಂದ, ನಮ್ಮ ಸರಕಾರದ ವಿರುದ್ಧ ಅಂತಹ ಆರೋಪಗಳು ಬರದಂತೆ ಎಚ್ಚರ ವಹಿಸುವುದು ಅಗತ್ಯ. ಪಕ್ಷದ ಕಾರ್ಯಕರ್ತರ ಜೊತೆ ಸಚಿವರು ನಿಕಟ ಸಂಪರ್ಕ ಹೊಂದಿರಬೇಕು. ಪ್ರಮುಖವಾಗಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಶ್ರಮವಹಿಸಿ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ.

ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ಆರ್ಥಿಕತೆ ದಿವಾಳಿಯಾಗಲಿದೆ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತವೆ. ಆದರೆ, ಸರಿಯಾದ ರೀತಿಯಲ್ಲಿ ಸಂಪನ್ಮೂಲ ಕ್ರೋಢೀಕರಿಸಿದರೆ ಅಂತಹ ಸಮಸ್ಯೆ ಎದುರಾಗುವುದಿಲ್ಲ. ನಾವು ಜನರ ಪರವಾಗಿರುವುದರಿಂದಲೆ, ಈ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಐತಿಹಾಸಿಕ ಗೆಲುವು ಕೊಟ್ಟಿದ್ದಾರೆ ಎಂದು ಸಚಿವರಿಗೆ ರಾಹುಲ್ ಗಾಂಧಿ ಕಿವಿಮಾತು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೆ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಈಗಿನಿಂದಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಅಡುಗೆ ಅನಿಲ ಸಿಲಿಂಡರ್ ದುಬಾರಿ ಈ ಎಲ್ಲ ವಿಷಯಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಗ್ಯಾರಂಟಿಗಳ ಬಗ್ಗೆ ಹೆಚ್ಚು ಪ್ರಚಾರ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

andolanait

Recent Posts

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

7 mins ago

5 ಹುಲಿಗಳ ದರ್ಶನ : ಸೆರೆಗೆ ಆನೆಗಳ ನೆರವು ; ಗ್ರಾಮದಲ್ಲಿ ನಿಷೇಧಾಜ್ಞೆ

ಚಾಮರಾಜನಗರ : ಜಿಲ್ಲೆಯ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ 5 ಹುಲಿಗಳ ಇರುವಿಕೆ ಡ್ರೋಣ್‌ನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ…

42 mins ago

ಸಾರ್ವಜನಿಕರ ಅಹವಾಲು ಸ್ವೀಕಾರ : ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ ಸಚಿವ ಮಹದೇವಪ್ಪ

ಮೈಸೂರು : ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸೋಮವಾರ ನಗರದಲ್ಲಿ…

46 mins ago

ಜಿಲ್ಲಾಸ್ಪತ್ರೆಗಳ ಮೇಲ್ದರ್ಜೆಗೆ ಚಿಂತನೆ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲು…

55 mins ago

India-New Zealand | ಮುಕ್ತ ವ್ಯಾಪಾರ ಒಪ್ಪಂದ : ಭಾರಿ ಪ್ರಮಾಣದ ಸುಂಕ ಕಡಿತ

ವೆಲ್ಲಿಂಗ್ಟನ್ : ಭಾರತದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ಮಾತುಕತೆ ಅಂತಿಮವಾಗಿದೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲುಕ್ಸನ್ ಸೋಮವಾರ ಹೇಳಿದ್ದಾರೆ.…

1 hour ago

ಪ್ರಾಚ್ಯವಿದ್ಯಾ ಸಂಶೋಧನಾಲಯ ಉತ್ಕೃಷ್ಠ ಜ್ಞಾನ ಗ್ರಂಥಗಳನ್ನು ಪ್ರಕಟಿಸಲಿ : ಭಾರತೀ ಸ್ವಾಮೀಜಿ ಆಶಯ

ಮೈಸೂರು : ಸಂಸ್ಕೃತ ಗ್ರಂಥ, ಶಾಸ್ತ್ರ ಗ್ರಂಥ, ವೇದಾಂತ ವಿಚಾರದ ಗ್ರಂಥಗಳನ್ನು ಅಧ್ಯಯನ ಮಾಡಿದರೆ ಜೀವನ ಸಾರ್ಥಕಗೊಳ್ಳಲಿದೆ ಎಂದು ಶೃಂಗೇರಿ…

1 hour ago