BREAKING NEWS

ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ ಪಕ್ಷ 18 ರಿಂದ 20 ಕ್ಷೇತ್ರಗಳನ್ನು ಗೆಲ್ಲಬೇಕು: ಕಾಂಗ್ರೆಸ್ ವರಿಷ್ಠರ ಚರ್ಚೆ

ನವದೆಹಲಿ : ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಹಿರಿಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

ಬುಧವಾರ ಹೊಸದಿಲ್ಲಿಯಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುಜೇವಾಲ ಉಪಸ್ಥಿತರಿದ್ದರು.

ರಾಜ್ಯದ ಜನತೆಗೆ ಸರಕಾರ ನೀಡಿರುವ ಐದು ಉಚಿತ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನವಾಗಬೇಕು. ಫಲಾನುಭವಿಗಳನ್ನು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಂಪರ್ಕ ಮಾಡಬೇಕು. ಫಲಾನುಭವಿಗಳ ಸಭೆ ಅಥವಾ ಸಮಾವೇಶಗಳನ್ನು ಮಾಡುವಂತೆಯೂ ಕಾಂಗ್ರೆಸ್ ನಾಯಕರು ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸುವುದು ತಡ ಮಾಡಬಾರದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಪ್ರಕಟಿಸುವುದರಿಂದ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸಹಕಾರಿಯಾಗುತ್ತದೆ ಎಂದು ರಾಜ್ಯ ನಾಯಕರು, ಎಐಸಿಸಿ ವರಿಷ್ಠರಿಗೆ ಕೋರಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶ ನೀಡಬಾರದು: ನಾವು ಜನಪರವಾಗಿದ್ದೇವೆ. ಜನರು ನಮ್ಮ ಪರವಾಗಿರುತ್ತಾರೆ. ಆದುದರಿಂದ, ಯಾವುದೆ ಕಾರಣಕ್ಕೂ ಸರಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬರದಂತೆ ಎಚ್ಚರಿಕೆ ವಹಿಸುವಂತೆ ಸಚಿವರಿಗೆ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಹಿಂದಿನ ಬಿಜೆಪಿ ಸರಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಟ ಮಾಡಿದ್ದೇವೆ. ಆದುದರಿಂದ, ನಮ್ಮ ಸರಕಾರದ ವಿರುದ್ಧ ಅಂತಹ ಆರೋಪಗಳು ಬರದಂತೆ ಎಚ್ಚರ ವಹಿಸುವುದು ಅಗತ್ಯ. ಪಕ್ಷದ ಕಾರ್ಯಕರ್ತರ ಜೊತೆ ಸಚಿವರು ನಿಕಟ ಸಂಪರ್ಕ ಹೊಂದಿರಬೇಕು. ಪ್ರಮುಖವಾಗಿ ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಲು ಶ್ರಮವಹಿಸಿ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎನ್ನಲಾಗಿದೆ.

ಗ್ಯಾರಂಟಿಗಳ ಅನುಷ್ಠಾನದಿಂದ ರಾಜ್ಯದ ಆರ್ಥಿಕತೆ ದಿವಾಳಿಯಾಗಲಿದೆ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತವೆ. ಆದರೆ, ಸರಿಯಾದ ರೀತಿಯಲ್ಲಿ ಸಂಪನ್ಮೂಲ ಕ್ರೋಢೀಕರಿಸಿದರೆ ಅಂತಹ ಸಮಸ್ಯೆ ಎದುರಾಗುವುದಿಲ್ಲ. ನಾವು ಜನರ ಪರವಾಗಿರುವುದರಿಂದಲೆ, ಈ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಐತಿಹಾಸಿಕ ಗೆಲುವು ಕೊಟ್ಟಿದ್ದಾರೆ ಎಂದು ಸಚಿವರಿಗೆ ರಾಹುಲ್ ಗಾಂಧಿ ಕಿವಿಮಾತು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೆ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದರ ಬಗ್ಗೆ ಈಗಿನಿಂದಲೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಅಡುಗೆ ಅನಿಲ ಸಿಲಿಂಡರ್ ದುಬಾರಿ ಈ ಎಲ್ಲ ವಿಷಯಗಳನ್ನು ಪ್ರಚಾರಕ್ಕೆ ಬಳಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ರಾಜ್ಯ ಸರಕಾರ ನೀಡಿರುವ ಐದು ಗ್ಯಾರಂಟಿಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲವಾಗಲಿದೆ. ಈ ಗ್ಯಾರಂಟಿಗಳ ಬಗ್ಗೆ ಹೆಚ್ಚು ಪ್ರಚಾರ ನಡೆಸುವಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ ಈ ಬಾರಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

andolanait

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

42 mins ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

1 hour ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

2 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

5 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

5 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

5 hours ago