BREAKING NEWS

ರಾಜ್ಯದ ಅಥ್ಲೀಟ್‌ ಬಿಂದು ರಾಣಿ ಮೇಲೆ ಕೋಚ್‌ ಪತ್ನಿ ದೌರ್ಜನ್ಯ

ಬೆಂಗಳೂರು : ರಾಜ್ಯದ ಅಥ್ಲೀಟ್‌ ಬಿಂದು ರಾಣಿ ಮೇಲೆ ರಾಜ್ಯದ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಬಿಂದು ರಾಣಿ ಅವರಿಗೆ ಚಪ್ಪಲಿ ತೋರಿಸಿ ತಳ್ಳಾಟ ನಡೆಸಿರುವ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಂದು ರಾಣಿ ಟೆಡ್‌ ಎಕ್ಸ್‌ ಶೋನಲ್ಲಿ ಭಾಗಹಿಸಿದ್ದರ ಕುರಿತಂತೆ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ ಇದೀಗ ಬಿಂದು ರಾಣಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಟೆಡ್‌ ಎಕ್ಸ್ ಶೋನಲ್ಲಿ ದೊಡ್ಡ ದೊಡ್ಡ ಸೆಲಿಬ್ರಿಟಿಗಳು ಭಾಗವಹಿಸಿ ಮಾತನಾಡುತ್ತಾರೆ.

ನಮ್ಮ ಕಂಠೀರವ ಸ್ಟೇಡಿಯಂ ಗ್ರೂಪ್‌ನಲ್ಲಿ ನನ್ನ ಪ್ರದರ್ಶನದ ಬಗ್ಗೆ ವಾಟ್ಸಾಪ್‌ ಗ್ರೂಪ್‌ನಲ್ಲಿ ಯತೀಶ್‌ ಪೋಸ್ಟ್ ಮಾಡಿದ್ದರು. ನಾನು ಖೇಲ್ ರತ್ನ ಸ್ಟಾರ್ ಅಲ್ಲ ಅಂತೆಲ್ಲಾ ಹಾಕಿದ್ರು. ಇನ್ನು ಅಥ್ಲೀಟ್‌ ಹೆಸರಲ್ಲಿ ದುಡ್ಡು ಮಾಡ್ತೀಯಾ ಅಂತ ಇನ್ನೊಂದು ಪೋಸ್ಟ್‌ ಹಾಕಿದ್ರು. ಹೀಗಾಗಿ ನನ್ನ ಗಂಡ ಸೀನಿಯರ್ ಕೋಚ್‌ಗೆ ಫೋನ್‌ ಮಾಡಿ ಮಾತನಾಡಿದ್ರು. ಈ ವೇಳೆ ಅವರ ಪತ್ನಿ ಫೋನ್ ರಿಸೀವ್ ಮಾಡಿ ಏಕವಚನದಲ್ಲೇ ಮಾತನಾಡಿದ್ರು ಎಂದು ಬಿಂದು ರಾಣಿ ಆರೋಪಿಸಿದ್ದಾರೆ.

ಇಂದು ಬೆಳಗ್ಗೆ ಇಲ್ಲಿನ ಕಂಠೀರವ ಸ್ಟೇಡಿಯಂಗೆ ಬಂದು ಮತ್ತೆ ಆ ವಿಚಾರದ ಕುರಿತಂತೆ ನನ್ನ ಮೇಲೆ ನಿಂದನೆ ಮಾಡಿದ್ದಾರೆ. ನಮ್ಮ ಅಸೋಸಿಯೇಷನ್‌ನಿಂದ ಬಂದು ಯಾರಾದ್ರೂ ಪ್ರಶ್ನೆ ಮಾಡಿದ್ರೆ ಉತ್ತರ ಕೊಡ್ತಿದ್ದೆ. ನನಗೂ ಹಾಗೂ ಅವರಿಗೂ ಈ ಹಿಂದೆ ಯಾವುದೇ ಪರಿಚಯವಿಲ್ಲ. ಅವರು ಕೋಚ್ ಹೆಂಡತಿಯಷ್ಟೇ. ಗಂಡನ ಜತೆ ಈ ಹಿಂದೆ ಅಲ್ಲಿಗೆ ಬರ್ತಿದ್ರು ಎಂದು ಬಿಂದು ರಾಣಿ ಹೇಳಿದ್ದಾರೆ.

ಕೋಚ್ ಯತೀಶ್‌ ಅವರ ಪತ್ನಿ ಓರ್ವ ಅಂತಾರಾಷ್ಟ್ರೀಯ ಟೆನಿಸ್ ಆಟಗಾರ್ತಿ ಎಂದು ಸ್ವತಃ ಸೀನಿಯರ್ ಕೋಚ್‌ ತಿಳಿಸಿದ್ದು, ತಮ್ಮ ಮೇಲೆ ಫೋನ್‌ ಮಾಡಿ ಟಾರ್ಗೆಟ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಇಂದು ಬೆಳಗ್ಗೆ ಬಿಂದು ರಾಣಿ ಕಂಠೀರವ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದ ವೇಳೆ ಸೀನಿಯರ್ ಕೋಚ್ ಯತೀಶ್ ಪತ್ನಿ, ಬಿಂದು ಅವರ ಬಳಿ ಬಂದು ಏಕವಚನದಲ್ಲಿ, ಏನೇ ನಿನ್ನ ಸಾಧನೆ. ಚಪ್ಪಲಿ ತೋರಿಸಿ ಇದು ನಿನ್ನ ನಿಜವಾದ ಅವಾರ್ಡ್ ಎಂದು ಆಕ್ರೋಶ ಹೊರಹಾಕಿದ್ದಾರೆ.ಇನ್ನೊಂದು ಸಲ ಹೀಗೆ ಮಾಡಬಾರದು. ಒಂದು ವೇಳೆ ಮಾಡಿದ್ರೆ ಮುಖಕ್ಕೆ ಚಪ್ಪಲಿ ಬೀಳ್ತಾವೆ ಎಂದು ಚಪ್ಪಲಿಯನ್ನು ಕೈಯಲ್ಲಿ ಹಿಡಿದುಕೊಂಡು ಸೀನಿಯರ್ ಕೋಚ್ ಯತೀಶ್ ಪತ್ನಿ, ಅಥ್ಲೀಟ್ ಬಿಂದು ರಾಣಿ ಅವರಿಗೆ ಬೆದರಿಕೆ ಹಾಕಿದ್ದಾರೆ.

lokesh

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

16 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

19 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

21 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

21 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

21 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

21 hours ago