BREAKING NEWS

ಅತೀಕ್, ಅಶ್ರಫ್ ಶೂಟೌಟ್| ಉತ್ತರ ಪ್ರದೇಶದಲ್ಲಿ ಸೆಕ್ಷನ್ 144: ನ್ಯಾಯಾಂಗ ತನಿಖೆ

ಪ್ರಯಾಗ್‌ರಾಜ್‌ (ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ನಡೆದ ಗ್ಯಾಂಗ್‌ಸ್ಟರ್- ಮಾಜಿ ಸಂಸದ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅವರ ಹತ್ಯೆ ಕುರಿತು ಉನ್ನತ ಮಟ್ಟದ ತನಿಖೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ಜಾರಿಗೆ ತರಲಾಗಿದೆ.

ಅತೀಕ್‌ (60) ಮತ್ತು ಅವರ ಸಹೋದರನನ್ನು ಶನಿವಾರ ರಾತ್ರಿ ಪೊಲೀಸರು ತಪಾಸಣೆಗಾಗಿ ಪ್ರಯಾಗರಾಜ್‌ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಮಾಧ್ಯಮ ಪ್ರತಿನಿಧಿಗಳ ಸೋಗಿನಲ್ಲಿ ಹೇಳಿಕೆ ಪಡೆಯುವಂತೆ ಮುಂದೆ ಬಂದ ಮೂವರು ನೇರವಾಗಿ ತಲೆಗೇ ಗುಂಡಿಟ್ಟರು.

ರಾತ್ರಿ 10ರ ಸುಮಾರಿನಲ್ಲಿ ನಡೆದ ಈ ಘಟನೆಯ ವಿಡಿಯೊ ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

‘ಅತೀಕ್‌ ಅಹ್ಮದ್ ಮತ್ತು ಅಶ್ರಫ್ ಹತ್ಯೆಯ ತನಿಖೆಗಾಗಿ ಮುಖ್ಯಮಂತ್ರಿ ಮೂರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದ್ದಾರೆ. ಮೂವರು ದಾಳಿಕೋರರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಈ ಬಗ್ಗೆ ವಿವರವಾದ ತನಿಖೆ ನಡೆಸಲಾಗುತ್ತಿದೆ’ ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಡಿಜಿ ಪ್ರಶಾಂತ್ ಕುಮಾರ್ ಹೇಳಿದರು.

ಪ್ರಯಾಗ್‌ರಾಜ್‌ನಲ್ಲಿ ರಾತ್ರಿ ನಡೆದ ಶೂಟೌಟ್‌ ನಂತರ, ಮುಖ್ಯಮಂತ್ರಿಗಳು ಲಖನೌನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ನಂತರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ ಎಂದು ಕುಮಾರ್ ಹೇಳಿದರು.

ಘಟನೆಯಲ್ಲಿ, ಕಾನ್‌ಸ್ಟೆಬಲ್ ಮಾನ್ ಸಿಂಗ್ ಅವರ ಕೈಗೆ ಗಾಯವಾಗಿದೆ. ಗುಂಡಿನ ದಾಳಿಯ ನಂತರ ನಡೆದ ಘರ್ಷಣೆಯಲ್ಲಿ ಪತ್ರಕರ್ತರೊಬ್ಬರು ಬಿದ್ದು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಬಂಧಿಯಾಗಿದ್ದ ಅತೀಕ್‌– ಅಶ್ರಫ್‌ ಬಿಎಸ್‌ಪಿಯ ಮಾಜಿ ಶಾಸಕ ರಾಜು ಪಾಲ್‌ ಅವರ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಕೊಲೆ ಪ್ರಕರಣದಲ್ಲಿ ಈ ಇಬ್ಬರು ಆರೋಪಿ ಗಳಾಗಿದ್ದರು.

ಉಮೇಶ್‌ ಪಾಲ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಅತೀಕ್‌ ಅಹ್ಮದ್‌ನ ಪುತ್ರ ಅಸಾದ್‌ ಹಾಗೂ ಆತನ ಸಹಚರ ಗುಲಾಮ್‌ ಉತ್ತರ ಪ್ರದೇಶದ ಪೊಲೀಸರು ಝಾನ್ಸಿಯಲ್ಲಿ ಗುರುವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು.

ಪಾತಕಿ ಅತೀಕ್‌ ಮೇಲೆ ಉಮೇಶ್‌ ಪಾಲ್‌ ಕೊಲೆ ಸೇರಿದಂತೆ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago