BREAKING NEWS

ಮಹಾರಾಷ್ಟ್ರದಲ್ಲಿ ‘ಗೋ ರಕ್ಷಕ’ರ ದಾಳಿ : ದನಗಳನ್ನು ಸಾಗಿಸುತ್ತಿದ್ದ ಯುವಕ ಸಾವು

ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲುಕ್ಮನ್ ಅನ್ಸಾರಿ ಎಂಬ ವ್ಯಕ್ತಿಯ ಶವ ಜೂನ್ 10 ರಂದು ನಾಸಿಕ್‌ನ ಇಗತ್‌ಪುರಿ ಪ್ರದೇಶದ ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳ ಒಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ಪ್ರಕರಣದ ತನಿಖೆ ನಡೆಸಿದಾಗ ಪೊಲೀಸರಿಗೆ ಗೋ ರಕ್ಷಕರು ದಾಳಿ ನಡೆಸಿದ ವಿಚಾರ ಗೊತ್ತಾಗಿದೆ.
ಈ ಪ್ರಕರಣ ಸಂಬಂಧ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪಿಗಳು ಬಲಪಂಥೀಯ ಹಿಂದೂ ಪರ ಸಂಘಟನೆಯಾದ ರಾಷ್ಟ್ರೀಯ ಬಜರಂಗ ದಳಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 8 ರಂದು ಮೃತ ಲುಕ್ಮನ್ ಅನ್ಸಾರಿ ಹಾಗೂ ಆತನ ಇಬ್ಬರು ಸಹಾಯಕರು ಟೆಂಪೋ ಒಂದರಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ವೇಳೆ 10 ರಿಂದ 15 ಮಂದಿ ಕಾರ್ಯಕರ್ತರು ಈ ವಾಹನವನ್ನು ತಡೆದರು. ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಸಹಾಪುರ ಪ್ರದೇಶದ ವಿಹಿಗಾಂವ್ ಎಂಬ ಊರಿನಲ್ಲಿ ಅನ್ಸಾರಿ ಅವರ ವಾಹನವನ್ನು ತಡೆಯಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.

ಈ ವೇಳೆ ಆರೋಪಿಗಳು ಟೆಂಪೋವನ್ನು ತಮ್ಮ ವಶಕ್ಕೆ ಪಡೆದು ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಹಸುಗಳನ್ನು ಬಂಧಮುಕ್ತಗೊಳಿಸಿದ ನಂತರ ಇಗತ್‌ಪುರಿ ಪ್ರದೇಶದ ಘಟನ್‌ ದೇವಿ ಗ್ರಾಮಕ್ಕೆ ವಾಹನವನ್ನು ತೆಗೆದುಕೊಂಡು ಹೋದರು ಎಂಬ ಮಾಹಿತಿ ಸಿಕ್ಕಿದೆ. ಈ ವಾಹನದಲ್ಲಿ ಅನ್ಸಾರಿ ಹಾಗೂ ಅವರ ಇಬ್ಬರು ಸಹಾಯಕರನ್ನು ಬಲವಂತವಾಗಿ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳವೊಂದರ ಬಳಿ ಬಳಿ ಟೆಂಪೋ ವಾಹನವನ್ನು ಕೊಂಡೊಯ್ದ ಆರೋಪಿಗಳು ಮೂವರ ಮೇಲೂ ಹಲ್ಲೆ ನಡೆಸಿದರು ಎಂಬ ಮಾಹಿತಿ ಸಿಕ್ಕಿದೆ. ಈ ವೇಳೆ ಅನ್ಸಾರಿ ಅವರ ಇಬ್ಬರು ಸಹಾಯಕರು ಹರಸಾಹಸ ನಡೆಸಿ ಘಟನಾ ಸ್ಥಳದಿಂದ ಪರಾರಿಯಾದರು. ಆದರೆ, ಅನ್ಸಾರಿ ಪರಾರಿಯಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆದರೆ ಬಂಧಿತ ಆರೋಪಿಗಳು ಮಾತ್ರ ಹಳ್ಳಕ್ಕೆ ಬಿದ್ದು ಅನ್ಸಾರಿ ಮೃತಪಟ್ಟ ಎಂದು ಹೇಳುತ್ತಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಮಾರಣಾಂತಿಕ ಥಳಿತದಿಂದಲೇ ಅನ್ಸಾರಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಕೇಸ್‌ಗಳನ್ನು ದಾಖಲು ಮಾಡಿದ್ದಾರೆ. ಈ ಪೈಕಿ ಒಂದು ಕೇಸ್‌ ಕೊಲೆ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 302ರ ಅಡಿ ದಾಖಲು ಮಾಡಲಾಗಿದೆ.

lokesh

Recent Posts

ಓದುಗರ ಪತ್ರ: ಯುವಜನರ ದಾರಿತಪ್ಪಿಸುವ ಸರ್ಕಾರದ ಕುಟಿಲ ನೀತಿ

ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…

53 mins ago

ಓದುಗರ ಪತ್ರ: ಸ್ವಾಗತಾರ್ಹ ನಡೆ!

ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…

55 mins ago

ಓದುಗರ ಪತ್ರ: ನಿರ್ಲಕ್ಷ್ಯಕ್ಕೆ ಒಳಗಾದ ಬ್ಯಾರಿಕೇಡ್‌ಗಳು

ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…

58 mins ago

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

1 hour ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

1 hour ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

1 hour ago