ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಲುಕ್ಮನ್ ಅನ್ಸಾರಿ ಎಂಬ ವ್ಯಕ್ತಿಯ ಶವ ಜೂನ್ 10 ರಂದು ನಾಸಿಕ್ನ ಇಗತ್ಪುರಿ ಪ್ರದೇಶದ ಘಟನ್ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳ ಒಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ಪ್ರಕರಣದ ತನಿಖೆ ನಡೆಸಿದಾಗ ಪೊಲೀಸರಿಗೆ ಗೋ ರಕ್ಷಕರು ದಾಳಿ ನಡೆಸಿದ ವಿಚಾರ ಗೊತ್ತಾಗಿದೆ.
ಈ ಪ್ರಕರಣ ಸಂಬಂಧ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪಿಗಳು ಬಲಪಂಥೀಯ ಹಿಂದೂ ಪರ ಸಂಘಟನೆಯಾದ ರಾಷ್ಟ್ರೀಯ ಬಜರಂಗ ದಳಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 8 ರಂದು ಮೃತ ಲುಕ್ಮನ್ ಅನ್ಸಾರಿ ಹಾಗೂ ಆತನ ಇಬ್ಬರು ಸಹಾಯಕರು ಟೆಂಪೋ ಒಂದರಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ವೇಳೆ 10 ರಿಂದ 15 ಮಂದಿ ಕಾರ್ಯಕರ್ತರು ಈ ವಾಹನವನ್ನು ತಡೆದರು. ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಸಹಾಪುರ ಪ್ರದೇಶದ ವಿಹಿಗಾಂವ್ ಎಂಬ ಊರಿನಲ್ಲಿ ಅನ್ಸಾರಿ ಅವರ ವಾಹನವನ್ನು ತಡೆಯಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
ಈ ವೇಳೆ ಆರೋಪಿಗಳು ಟೆಂಪೋವನ್ನು ತಮ್ಮ ವಶಕ್ಕೆ ಪಡೆದು ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಹಸುಗಳನ್ನು ಬಂಧಮುಕ್ತಗೊಳಿಸಿದ ನಂತರ ಇಗತ್ಪುರಿ ಪ್ರದೇಶದ ಘಟನ್ ದೇವಿ ಗ್ರಾಮಕ್ಕೆ ವಾಹನವನ್ನು ತೆಗೆದುಕೊಂಡು ಹೋದರು ಎಂಬ ಮಾಹಿತಿ ಸಿಕ್ಕಿದೆ. ಈ ವಾಹನದಲ್ಲಿ ಅನ್ಸಾರಿ ಹಾಗೂ ಅವರ ಇಬ್ಬರು ಸಹಾಯಕರನ್ನು ಬಲವಂತವಾಗಿ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಘಟನ್ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳವೊಂದರ ಬಳಿ ಬಳಿ ಟೆಂಪೋ ವಾಹನವನ್ನು ಕೊಂಡೊಯ್ದ ಆರೋಪಿಗಳು ಮೂವರ ಮೇಲೂ ಹಲ್ಲೆ ನಡೆಸಿದರು ಎಂಬ ಮಾಹಿತಿ ಸಿಕ್ಕಿದೆ. ಈ ವೇಳೆ ಅನ್ಸಾರಿ ಅವರ ಇಬ್ಬರು ಸಹಾಯಕರು ಹರಸಾಹಸ ನಡೆಸಿ ಘಟನಾ ಸ್ಥಳದಿಂದ ಪರಾರಿಯಾದರು. ಆದರೆ, ಅನ್ಸಾರಿ ಪರಾರಿಯಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಆದರೆ ಬಂಧಿತ ಆರೋಪಿಗಳು ಮಾತ್ರ ಹಳ್ಳಕ್ಕೆ ಬಿದ್ದು ಅನ್ಸಾರಿ ಮೃತಪಟ್ಟ ಎಂದು ಹೇಳುತ್ತಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಮಾರಣಾಂತಿಕ ಥಳಿತದಿಂದಲೇ ಅನ್ಸಾರಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಕೇಸ್ಗಳನ್ನು ದಾಖಲು ಮಾಡಿದ್ದಾರೆ. ಈ ಪೈಕಿ ಒಂದು ಕೇಸ್ ಕೊಲೆ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 302ರ ಅಡಿ ದಾಖಲು ಮಾಡಲಾಗಿದೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…