BREAKING NEWS

ಮಹಾರಾಷ್ಟ್ರದಲ್ಲಿ ‘ಗೋ ರಕ್ಷಕ’ರ ದಾಳಿ : ದನಗಳನ್ನು ಸಾಗಿಸುತ್ತಿದ್ದ ಯುವಕ ಸಾವು

ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲುಕ್ಮನ್ ಅನ್ಸಾರಿ ಎಂಬ ವ್ಯಕ್ತಿಯ ಶವ ಜೂನ್ 10 ರಂದು ನಾಸಿಕ್‌ನ ಇಗತ್‌ಪುರಿ ಪ್ರದೇಶದ ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳ ಒಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ಪ್ರಕರಣದ ತನಿಖೆ ನಡೆಸಿದಾಗ ಪೊಲೀಸರಿಗೆ ಗೋ ರಕ್ಷಕರು ದಾಳಿ ನಡೆಸಿದ ವಿಚಾರ ಗೊತ್ತಾಗಿದೆ.
ಈ ಪ್ರಕರಣ ಸಂಬಂಧ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪಿಗಳು ಬಲಪಂಥೀಯ ಹಿಂದೂ ಪರ ಸಂಘಟನೆಯಾದ ರಾಷ್ಟ್ರೀಯ ಬಜರಂಗ ದಳಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 8 ರಂದು ಮೃತ ಲುಕ್ಮನ್ ಅನ್ಸಾರಿ ಹಾಗೂ ಆತನ ಇಬ್ಬರು ಸಹಾಯಕರು ಟೆಂಪೋ ಒಂದರಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ವೇಳೆ 10 ರಿಂದ 15 ಮಂದಿ ಕಾರ್ಯಕರ್ತರು ಈ ವಾಹನವನ್ನು ತಡೆದರು. ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಸಹಾಪುರ ಪ್ರದೇಶದ ವಿಹಿಗಾಂವ್ ಎಂಬ ಊರಿನಲ್ಲಿ ಅನ್ಸಾರಿ ಅವರ ವಾಹನವನ್ನು ತಡೆಯಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.

ಈ ವೇಳೆ ಆರೋಪಿಗಳು ಟೆಂಪೋವನ್ನು ತಮ್ಮ ವಶಕ್ಕೆ ಪಡೆದು ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಹಸುಗಳನ್ನು ಬಂಧಮುಕ್ತಗೊಳಿಸಿದ ನಂತರ ಇಗತ್‌ಪುರಿ ಪ್ರದೇಶದ ಘಟನ್‌ ದೇವಿ ಗ್ರಾಮಕ್ಕೆ ವಾಹನವನ್ನು ತೆಗೆದುಕೊಂಡು ಹೋದರು ಎಂಬ ಮಾಹಿತಿ ಸಿಕ್ಕಿದೆ. ಈ ವಾಹನದಲ್ಲಿ ಅನ್ಸಾರಿ ಹಾಗೂ ಅವರ ಇಬ್ಬರು ಸಹಾಯಕರನ್ನು ಬಲವಂತವಾಗಿ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

ಘಟನ್‌ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳವೊಂದರ ಬಳಿ ಬಳಿ ಟೆಂಪೋ ವಾಹನವನ್ನು ಕೊಂಡೊಯ್ದ ಆರೋಪಿಗಳು ಮೂವರ ಮೇಲೂ ಹಲ್ಲೆ ನಡೆಸಿದರು ಎಂಬ ಮಾಹಿತಿ ಸಿಕ್ಕಿದೆ. ಈ ವೇಳೆ ಅನ್ಸಾರಿ ಅವರ ಇಬ್ಬರು ಸಹಾಯಕರು ಹರಸಾಹಸ ನಡೆಸಿ ಘಟನಾ ಸ್ಥಳದಿಂದ ಪರಾರಿಯಾದರು. ಆದರೆ, ಅನ್ಸಾರಿ ಪರಾರಿಯಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಆದರೆ ಬಂಧಿತ ಆರೋಪಿಗಳು ಮಾತ್ರ ಹಳ್ಳಕ್ಕೆ ಬಿದ್ದು ಅನ್ಸಾರಿ ಮೃತಪಟ್ಟ ಎಂದು ಹೇಳುತ್ತಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಮಾರಣಾಂತಿಕ ಥಳಿತದಿಂದಲೇ ಅನ್ಸಾರಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಕೇಸ್‌ಗಳನ್ನು ದಾಖಲು ಮಾಡಿದ್ದಾರೆ. ಈ ಪೈಕಿ ಒಂದು ಕೇಸ್‌ ಕೊಲೆ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 302ರ ಅಡಿ ದಾಖಲು ಮಾಡಲಾಗಿದೆ.

lokesh

Recent Posts

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ…

17 mins ago

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

3 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

3 hours ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

3 hours ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

3 hours ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

4 hours ago