ಮಹಾರಾಷ್ಟ್ರ : ಗೋವುಗಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಅನುಮಾನದ ಮೇರೆಗೆ ಗೋ ರಕ್ಷಕರು ದಾಳಿ ನಡೆಸಿದ ವೇಳೆ 23 ವರ್ಷ ವಯಸ್ಸಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರ ರಾಜ್ಯದ ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಲುಕ್ಮನ್ ಅನ್ಸಾರಿ ಎಂಬ ವ್ಯಕ್ತಿಯ ಶವ ಜೂನ್ 10 ರಂದು ನಾಸಿಕ್ನ ಇಗತ್ಪುರಿ ಪ್ರದೇಶದ ಘಟನ್ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳ ಒಂದರಲ್ಲಿ ಪತ್ತೆಯಾಗಿತ್ತು. ಈ ವೇಳೆ ಪ್ರಕರಣದ ತನಿಖೆ ನಡೆಸಿದಾಗ ಪೊಲೀಸರಿಗೆ ಗೋ ರಕ್ಷಕರು ದಾಳಿ ನಡೆಸಿದ ವಿಚಾರ ಗೊತ್ತಾಗಿದೆ.
ಈ ಪ್ರಕರಣ ಸಂಬಂಧ ಈಗಾಗಲೇ 6 ಮಂದಿಯನ್ನು ಬಂಧಿಸಲಾಗಿದ್ದು, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆಗೆ ಮುಂದಾಗಿದ್ದಾರೆ. ಕಾನೂನು ಕೈಗೆತ್ತಿಕೊಂಡು ನೈತಿಕ ಪೊಲೀಸ್ಗಿರಿ ನಡೆಸಿದ ಆರೋಪಿಗಳು ಬಲಪಂಥೀಯ ಹಿಂದೂ ಪರ ಸಂಘಟನೆಯಾದ ರಾಷ್ಟ್ರೀಯ ಬಜರಂಗ ದಳಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.
ಜೂನ್ 8 ರಂದು ಮೃತ ಲುಕ್ಮನ್ ಅನ್ಸಾರಿ ಹಾಗೂ ಆತನ ಇಬ್ಬರು ಸಹಾಯಕರು ಟೆಂಪೋ ಒಂದರಲ್ಲಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದರು. ಈ ವೇಳೆ 10 ರಿಂದ 15 ಮಂದಿ ಕಾರ್ಯಕರ್ತರು ಈ ವಾಹನವನ್ನು ತಡೆದರು. ಮಹಾರಾಷ್ಟ್ರ ರಾಜ್ಯದ ಥಾಣೆ ಜಿಲ್ಲೆಯ ಸಹಾಪುರ ಪ್ರದೇಶದ ವಿಹಿಗಾಂವ್ ಎಂಬ ಊರಿನಲ್ಲಿ ಅನ್ಸಾರಿ ಅವರ ವಾಹನವನ್ನು ತಡೆಯಲಾಗಿತ್ತು ಎಂಬ ಮಾಹಿತಿ ಸಿಕ್ಕಿದೆ.
ಈ ವೇಳೆ ಆರೋಪಿಗಳು ಟೆಂಪೋವನ್ನು ತಮ್ಮ ವಶಕ್ಕೆ ಪಡೆದು ನಾಲ್ಕು ಗೋವುಗಳನ್ನು ರಕ್ಷಣೆ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಹಸುಗಳನ್ನು ಬಂಧಮುಕ್ತಗೊಳಿಸಿದ ನಂತರ ಇಗತ್ಪುರಿ ಪ್ರದೇಶದ ಘಟನ್ ದೇವಿ ಗ್ರಾಮಕ್ಕೆ ವಾಹನವನ್ನು ತೆಗೆದುಕೊಂಡು ಹೋದರು ಎಂಬ ಮಾಹಿತಿ ಸಿಕ್ಕಿದೆ. ಈ ವಾಹನದಲ್ಲಿ ಅನ್ಸಾರಿ ಹಾಗೂ ಅವರ ಇಬ್ಬರು ಸಹಾಯಕರನ್ನು ಬಲವಂತವಾಗಿ ಕಟ್ಟಿ ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಘಟನ್ದೇವಿ ಗ್ರಾಮದ ನಿರ್ಜನ ಪ್ರದೇಶದ ಹಳ್ಳವೊಂದರ ಬಳಿ ಬಳಿ ಟೆಂಪೋ ವಾಹನವನ್ನು ಕೊಂಡೊಯ್ದ ಆರೋಪಿಗಳು ಮೂವರ ಮೇಲೂ ಹಲ್ಲೆ ನಡೆಸಿದರು ಎಂಬ ಮಾಹಿತಿ ಸಿಕ್ಕಿದೆ. ಈ ವೇಳೆ ಅನ್ಸಾರಿ ಅವರ ಇಬ್ಬರು ಸಹಾಯಕರು ಹರಸಾಹಸ ನಡೆಸಿ ಘಟನಾ ಸ್ಥಳದಿಂದ ಪರಾರಿಯಾದರು. ಆದರೆ, ಅನ್ಸಾರಿ ಪರಾರಿಯಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಆದರೆ ಬಂಧಿತ ಆರೋಪಿಗಳು ಮಾತ್ರ ಹಳ್ಳಕ್ಕೆ ಬಿದ್ದು ಅನ್ಸಾರಿ ಮೃತಪಟ್ಟ ಎಂದು ಹೇಳುತ್ತಿದ್ದಾರೆ. ಆದ್ರೆ, ಪೊಲೀಸರು ಮಾತ್ರ ಮಾರಣಾಂತಿಕ ಥಳಿತದಿಂದಲೇ ಅನ್ಸಾರಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಎರಡು ಪ್ರತ್ಯೇಕ ಕೇಸ್ಗಳನ್ನು ದಾಖಲು ಮಾಡಿದ್ದಾರೆ. ಈ ಪೈಕಿ ಒಂದು ಕೇಸ್ ಕೊಲೆ ಪ್ರಕರಣವಾಗಿದ್ದು, ಭಾರತೀಯ ದಂಡ ಸಂಹಿತೆ ಐಪಿಸಿ ಸೆಕ್ಷನ್ 302ರ ಅಡಿ ದಾಖಲು ಮಾಡಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…