ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಮಗಢ ಸೆಕ್ಟರ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಬಿಎಸ್ಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸಿದೆ.
ಪಾಕ್ ಸೇನೆ ನಡೆಸಿದ ದಾಳಿಯಿಂದ ಬಿಎಸ್ಎಫ್ ಸಿಬ್ಬಂದಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಪಾಕ್ ದಾಳಿಯಿಂದ ರಾಮಗಢ ಪ್ರದೇಶದ ಸುತ್ತಮುತ್ತ ಗ್ರಾಮಸ್ಥರು ಭಯಗೊಂಡು ಬಂಕರ್ ಗಳಲ್ಲಿ ಆಶ್ರಯ ಪಡೆದಿದ್ದಾರೆ.
ಪಾಕಿಸ್ತಾನ ಹಾಗೂ ಭಾರತ 2021 ರ ಫೆ.25 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಜಮ್ಮು ಗಡಿಯಲ್ಲಿ 24 ದಿನಗಳಲ್ಲಿ ನಡೆದ ಮೂರನೇ ಕದನ ವಿರಾಮ ಉಲ್ಲಂಘನೆ ಇದಾಗಿದೆ. ಅಲ್ಲದೇ ಈ ಮೂಲಕ ಒಟ್ಟಾರೆ ಆರನೇ ಉಲ್ಲಂಘನೆ ಇದಾಗಿದೆ.
ಅಕ್ಟೋಬರ್ 28 ರಂದು ಪಾಕಿಸ್ತಾನ ರೇಂಜರ್ ಗಳು ಸುಮಾರು ಏಳು ಗಂಟೆಗಳ ಕಾಲ ಗುಂಡು ಹಾಗೂ ಶೆಲ್ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಬಿಎಸ್ಎಫ್ ಯೋಧರು ಮತ್ತು ಓರ್ವ ಮಹಿಳೆ ಗಾಯಗೊಂಡಿದ್ದರು. ಅಕ್ಟೋಬರ್ 17 ರಂದು ಅರ್ನಿಯಾ ಸೆಕ್ಟರ್ ನಲ್ಲಿ ಪಾಕಿಸ್ತಾನದ ರೇಂಜರ್ ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್ಎಫ್ ಸಿಬ್ಬಂದಿ ಗಾಯಗೊಂಡಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…