BREAKING NEWS

ಪಾಕ್ ಸೇನೆಯಿಂದ ಪುಂಡಾಟ : ಬಿಎಸ್‍ಎಫ್ ಯೋಧ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಮಗಢ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ವೇಳೆ ಭಾರತೀಯ ಸೇನೆ ಸಹ ತಕ್ಕ ಪ್ರತ್ಯುತ್ತರ ನೀಡಿದ್ದು, ಶತ್ರು ಸೇನೆಯನ್ನು ಹಿಮ್ಮೆಟ್ಟಿಸಿದೆ.

ಪಾಕ್ ಸೇನೆ ನಡೆಸಿದ ದಾಳಿಯಿಂದ ಬಿಎಸ್‍ಎಫ್ ಸಿಬ್ಬಂದಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಪಾಕ್ ದಾಳಿಯಿಂದ ರಾಮಗಢ ಪ್ರದೇಶದ ಸುತ್ತಮುತ್ತ ಗ್ರಾಮಸ್ಥರು ಭಯಗೊಂಡು ಬಂಕರ್‍ ಗಳಲ್ಲಿ ಆಶ್ರಯ ಪಡೆದಿದ್ದಾರೆ.

ಪಾಕಿಸ್ತಾನ ಹಾಗೂ ಭಾರತ 2021 ರ ಫೆ.25 ರಂದು ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಜಮ್ಮು ಗಡಿಯಲ್ಲಿ 24 ದಿನಗಳಲ್ಲಿ ನಡೆದ ಮೂರನೇ ಕದನ ವಿರಾಮ ಉಲ್ಲಂಘನೆ ಇದಾಗಿದೆ. ಅಲ್ಲದೇ ಈ ಮೂಲಕ ಒಟ್ಟಾರೆ ಆರನೇ ಉಲ್ಲಂಘನೆ ಇದಾಗಿದೆ.

ಅಕ್ಟೋಬರ್ 28 ರಂದು ಪಾಕಿಸ್ತಾನ ರೇಂಜರ್‍ ಗಳು ಸುಮಾರು ಏಳು ಗಂಟೆಗಳ ಕಾಲ ಗುಂಡು ಹಾಗೂ ಶೆಲ್ ದಾಳಿ ನಡೆಸಿತ್ತು. ಈ ವೇಳೆ ಇಬ್ಬರು ಬಿಎಸ್‍ಎಫ್ ಯೋಧರು ಮತ್ತು ಓರ್ವ ಮಹಿಳೆ ಗಾಯಗೊಂಡಿದ್ದರು. ಅಕ್ಟೋಬರ್ 17 ರಂದು ಅರ್ನಿಯಾ ಸೆಕ್ಟರ್‍ ನಲ್ಲಿ ಪಾಕಿಸ್ತಾನದ ರೇಂಜರ್‍ ಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ಬಿಎಸ್‍ಎಫ್ ಸಿಬ್ಬಂದಿ ಗಾಯಗೊಂಡಿದ್ದರು.

lokesh

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

44 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

51 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

56 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago