ಕೊಪ್ಪಳ : 200 ಯುನಿಟ್ ಕರೆಂಟ್ ಫ್ರೀ ಕೊಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದ್ದು, ಜನ ಇದನ್ನೇ ನೆಪ ಮಾಡಿಕೊಂಡು ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಹಠಕ್ಕೆ ಬಿದ್ದಿದ್ದಾರೆ. ಅಂತೆಯೇ ಇದೀಗ ಕೊಪ್ಪಳದಲ್ಲಿ ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಬಂದವರ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಕುಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಎಂಬವರು ಕಳೆದ ಆರು ತಿಂಗಳಿನಿಂದ ಬಿಲ್ ಬಾಕಿ ಉಳಿಸಿಕೊಂಡಿದ್ದರು. ಬಿಲ್ ಪಾವತಿ ಮಾಡದ ಹಿನ್ನೆಲೆಯಲ್ಲಿ ಲೈನ್ ಮ್ಯಾನ್ ಮಂಜುನಾಥ ಬಿಲ್ ವಸೂಲಾತಿಗೆ ತೆರಳಿದ್ದರು. ಈ ವೇಳೆ ವಿದ್ಯುತ್ ಬಿಲ್ ಕಟ್ಟಲ್ಲ, ಕರೆಂಟ್ ಫ್ರೀ ಎಂದು ಹೇಳಿದ್ದಾರೆ, ಅಲ್ಲದೆ ಅವಾಚ್ಯ ಪದಗಳಿಂದ ನಿಂದಿಸಿ ಚಪ್ಪಲಿಯಿಂದ ಹಲ್ಲೆ ಮಾಡಲಾಗಿದೆ.
ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಮಂಜುನಾಥ್ ಅವರು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…