BREAKING NEWS

ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ; ಡಿಕೆಶಿ, ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್‌ಟಿ, ಎಸ್‌ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಆಯಿತು ಎಂದರು.
ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಸಿ-ಎಸ್‌ಟಿ ಮೀಸಲು ಹೆಚ್ಚಳ ಕೇಂದ್ರಕ್ಕೆ ಶಿಫಾರಸು!
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ.24ಕ್ಕೆ ಹೆಚ್ಚಳ ಮಾಡಿ ಕರ್ನಾಟಕ ರೂಪಿಸಿರುವ ಶಾಸನವನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರ್ಪಡೆ ಮಾಡಲು ಕರ್ನಾಟಕ ಸರಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟರ ಮೀಸಲಾತಿಯನ್ನು ಒಟ್ಟಾರೆ ಶೇ.6ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡು ವಿಧಾನ ಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿತ್ತು. ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳು ವಿಧೇಯಕಕ್ಕೆ ಅನುಮೋದನೆ ನೀಡಿದ್ದವು. ಜನವರಿ 11 ರಂದು ರಾಜ್ಯಪಾಲರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ, ಎರಡು ತಿಂಗಳ ಬಳಿಕ ವಿಧೇಯಕವನ್ನು ಶೆಡ್ಯೂಲ್‌ 9ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

lokesh

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

22 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

28 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

37 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago