ಬೆಂಗಳೂರು: ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್ಪ್ರೆಸ್ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್ಟಿ, ಎಸ್ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್ನಲ್ಲೂ ನಿರ್ಧಾರ ಆಯಿತು ಎಂದರು.
ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್ಸಿ-ಎಸ್ಟಿ ಮೀಸಲು ಹೆಚ್ಚಳ ಕೇಂದ್ರಕ್ಕೆ ಶಿಫಾರಸು!
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ.24ಕ್ಕೆ ಹೆಚ್ಚಳ ಮಾಡಿ ಕರ್ನಾಟಕ ರೂಪಿಸಿರುವ ಶಾಸನವನ್ನು ಸಂವಿಧಾನದ ಶೆಡ್ಯೂಲ್ 9ರಲ್ಲಿ ಸೇರ್ಪಡೆ ಮಾಡಲು ಕರ್ನಾಟಕ ಸರಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟರ ಮೀಸಲಾತಿಯನ್ನು ಒಟ್ಟಾರೆ ಶೇ.6ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡು ವಿಧಾನ ಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿತ್ತು. ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳು ವಿಧೇಯಕಕ್ಕೆ ಅನುಮೋದನೆ ನೀಡಿದ್ದವು. ಜನವರಿ 11 ರಂದು ರಾಜ್ಯಪಾಲರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ, ಎರಡು ತಿಂಗಳ ಬಳಿಕ ವಿಧೇಯಕವನ್ನು ಶೆಡ್ಯೂಲ್ 9ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…
ಬೆಂಗಳೂರು : "ಮಾನವ ಧರ್ಮದ ಸೇವೆ ಮಾಡಬೇಕು ಎಂದವರು ಮಾತ್ರ ವೈದ್ಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೇವಾ ಮನೋಭಾವ ಇಲ್ಲದಿದ್ದವರು…
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…