BREAKING NEWS

ಕಾಂಗ್ರೆಸ್‌ನಿಂದ ರಾಜಭವನ ಚಲೋಗೆ ಯತ್ನ; ಡಿಕೆಶಿ, ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್‌ ಸರ್ಕಲ್ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡರು.
ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್, ಪರಿಷತ್ ವಿಪಕ್ಷ ನಾಯಕ ಬಿಕೆ‌ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಭಾಗಿಯಾಗಿದ್ದರು.
ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಎಸ್‌ಟಿ, ಎಸ್‌ಸಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸಲು ಇಷ್ಟು ದಿನ ಏನು ಮಾಡುತ್ತಿದ್ದರು? ಮೀಸಲಾತಿ ಹೆಚ್ಚಳಕ್ಕೆ ಆದೇಶ ಯಾವಾಗ ಆಯಿತು? ಆದೇಶ ಆಗಿ ಬಹಳ ದಿನ ಆಯ್ತು, ನಂತರದಲ್ಲಿ ಕ್ಯಾಬಿನೆಟ್‌ನಲ್ಲೂ ನಿರ್ಧಾರ ಆಯಿತು ಎಂದರು.
ನಾವು ಪ್ರತಿಭಟನೆಗೆ ಕರೆ ಕೊಟ್ಟ ಬಳಿಕ ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಶೇ.50ರಷ್ಟು ಇರುವ ಮೀಸಲಾತಿ ಏರಿಕೆ ಮಾಡುವ ಯಾವುದೇ ಪ್ರಸ್ತಾವ ಇಲ್ಲ ಎಂದು ಕೇಂದ್ರ ಸರ್ಕಾರ ಉತ್ತರ ಕೊಟ್ಟಿದೆ. ಅಂದರೆ ಏನು ಅರ್ಥ? ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳ ಮಾಡಿದರೂ ಕೇಂದ್ರ ಒಪ್ಪಲ್ಲ ಎಂದಲ್ಲವೇ ಎಂದು ಪ್ರಶ್ನಿಸಿದರು.
ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇ.50 ಮೀರಬಾರದು ಎಂದಿದೆ. ಅದು ಮೀರಬೇಕಾದರೆ ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು. ಕೇವಲ ಮತಕ್ಕಾಗಿ ಹಾಗೂ ಜನರ ದಾರಿತಪ್ಪಿಸಲು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ದಲಿತರಿಗೆ ಎಷ್ಟು ಮೋಸ ಮಾಡುತ್ತಿದ್ದೀರಿ? ಬಿಜೆಪಿ ಸರ್ಕಾರ ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿ ಸರ್ಕಾರ 15 ದಿನ ಮಾತ್ರ ಇದೆ. ಅಷ್ಟು ದಿನ ಕೂಡಾ ಇರಬಾರದು. ಕೂಡಲೇ ವಜಾ ಮಾಡಬೇಕು ಎಂದು ಒತ್ತಾಯಿಸಿ, ರಾಜ ಭವನ ಚಲೋ ಹಮ್ಮಿಕೊಂಡಿದ್ದೇವೆ. ಬಿಜೆಪಿ ಸರ್ಕಾರ ದಲಿತರಿಗೆ ಅವಮಾನ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಸಿ-ಎಸ್‌ಟಿ ಮೀಸಲು ಹೆಚ್ಚಳ ಕೇಂದ್ರಕ್ಕೆ ಶಿಫಾರಸು!
ಪರಿಶಿಷ್ಟ ಜಾತಿ, ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ.24ಕ್ಕೆ ಹೆಚ್ಚಳ ಮಾಡಿ ಕರ್ನಾಟಕ ರೂಪಿಸಿರುವ ಶಾಸನವನ್ನು ಸಂವಿಧಾನದ ಶೆಡ್ಯೂಲ್‌ 9ರಲ್ಲಿ ಸೇರ್ಪಡೆ ಮಾಡಲು ಕರ್ನಾಟಕ ಸರಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಪರಿಶಿಷ್ಟರ ಮೀಸಲಾತಿಯನ್ನು ಒಟ್ಟಾರೆ ಶೇ.6ರಷ್ಟು ಏರಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡು ವಿಧಾನ ಮಂಡಲ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಿತ್ತು. ಚಳಿಗಾಲದ ಅಧಿವೇಶನದಲ್ಲಿ ಉಭಯ ಸದನಗಳು ವಿಧೇಯಕಕ್ಕೆ ಅನುಮೋದನೆ ನೀಡಿದ್ದವು. ಜನವರಿ 11 ರಂದು ರಾಜ್ಯಪಾಲರು ಒಪ್ಪಿಗೆ ಕೂಡ ಸೂಚಿಸಿದ್ದರು. ಆದರೆ, ಎರಡು ತಿಂಗಳ ಬಳಿಕ ವಿಧೇಯಕವನ್ನು ಶೆಡ್ಯೂಲ್‌ 9ಗೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ.

lokesh

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

5 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

5 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

5 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

6 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

8 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

13 hours ago