ಬೆಂಗಳೂರು : ಪ್ಯಾರೀಸ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಾರ್ಗ ಮಧ್ಯೆ ವಿಮಾನದ ದ್ವಾರ ತೆರೆಯಲು ಪ್ರಯತ್ನಿಸಿದ ಆರೋಪದಡಿ ಓರ್ವ ಯುವಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ರಾಜಮಂಡ್ರಿ ಮೂಲದ ವೆಂಕಟ್ ಮೋಹಿತ್(29) ಬಂಧಿತ. ಆರೋಪಿಯು ಪ್ಯಾರೀಸ್ನಿಂದ ಏರ್ ಫ್ರಾನ್ಸ್ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ. ವಿಮಾನ ಬೆಂಗಳೂರು ತಲುಪಲು ಇನ್ನು ನಾಲ್ಕು ತಾಸು ಇರುವಾಗ ಏಕಾಏಕಿ ವಿಮಾನದ ಹಿಂಬದಿಯ ಎಡಭಾಗದ ದ್ವಾರದ ತೆರೆಯಲು ಪ್ರಯತ್ನಿಸಿದ್ದಾನೆ.
ಈ ಸಂಬಂಧ ವಿಮಾನದ ಸಿಬ್ಭಂದಿ ನೀಡಿದ ವರದಿ ಮೇರೆಗೆ ಏರ್ ಫ್ರಾನ್ಸ್ ಇಂಡಿಯಾದ ಡ್ಯೂಟಿ ಮ್ಯಾನೇಜರ್ ಶೀಬಾ ಸ್ವಾಮೀನಾಥನ್ ಅವರು ವೆಂಕಟ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…