BREAKING NEWS

ಅಮೆರಿಕಕ್ಕೆ ಅಕ್ರಮ ಪ್ರವೇಶ ಯತ್ನ: 97 ಸಾವಿರ ಭಾರತೀಯರ ಬಂಧನ

ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್‌ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ ವಿಭಾಗ (ಯುಸಿಬಿಪಿ) ಅಂಕಿ ಅಂಶ ಬಹಿರಂಗಪಡಿಸಿದೆ.

ದುರ್ಗಮ ಹಾದಿಯಲ್ಲಿ ಇಂಥ ನುಸುಳುವಿಕೆ ಅವಧಿಯಲ್ಲಿ ಜೀವಹಾನಿಯ ಹಲವು ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಭಾರಿ ಸಂಖ್ಯೆಯ ಭಾರತೀಯರು ಈ ಮಾರ್ಗ ಅನುಸರಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. 96917 ಮಂದಿ ಭಾರತೀಯರ ಪೈಕಿ 30100 ಮಂದಿಯನ್ನು ಕೆನಡಾ ಗಡಿಯಲ್ಲಿ ಮತ್ತು 41770 ಮಂದಿಯನ್ನು ಮೆಕ್ಸಿಕೊ ಗಡಿಯಲ್ಲಿ ಪತ್ತೆ ಮಾಡಲಾಗಿದೆ ಎಂದು ಯುಸಿಬಿಪಿ ಸ್ಪಷ್ಟಪಡಿಸಿದೆ.

ಉಳಿದವರನ್ನು ಅಮೆರಿಕಕ್ಕೆ ನುಸುಳಿದ ಬಳಿಕ ಪತ್ತೆ ಮಾಡಲಾಗಿದೆ. 2019-20ರಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸಿದ 19883 ಮಂದಿ ಭಾರತೀಯರನ್ನು ಬಂಧಿಸಲಾಗಿದ್ದರೆ, ಕಳೆದ ವರ್ಷ ಈ ಪ್ರಮಾಣ ಐದು ಪಟ್ಟು ಹೆಚ್ಚಿದೆ.

ಈ ಅಂಕಿ ಅಂಶಗಳು ಕೇವಲ ದಾಖಲಾದ ಪ್ರಕರಣಗಳನ್ನಷ್ಟೇ ಬಿಂಬಿಸುತ್ತವೆ. ವಾಸ್ತವ ಸಂಖ್ಯೆ ಇನ್ನಷ್ಟು ಅಧಿಕ ಎಂದು ಕಾನೂನು ಜಾರಿ ಅಧಿಕಾರಿಗಳು ಹೇಳುತ್ತಾರೆ. “ಇದು ಇಡೀ ವ್ಯವಸ್ಥೆಯ ಒಂದು ತುಣುಕು. ಗಡಿಯಲ್ಲಿ ಒಬ್ಬನನ್ನು ಸೆರೆ ಹಿಡಿಯುವ ಅವಧಿಯಲ್ಲಿ ಕನಿಷ್ಠ 10 ಮಂದಿ ಯಶಸ್ವಿಯಾಗಿ ಅಮೆರಿಕಕ್ಕೆ ನುಸುಳಿರುತ್ತಾರೆ” ಎಂದು ಗುಜರಾತ್‍ನ ಪೊಲೀಸ್ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯವಾಗಿ ಗುಜರಾತ್ ಹಾಗೂ ಪಂಜಾಬ್‍ನ ಜನತೆ ಅಮೆರಿಕದಲ್ಲಿ ನೆಲೆಸಲು ಬಯಸುತ್ತಾರೆ ಎಂದು ಅಕ್ರಮ ನುಸುಳುವಿಕೆ ದಂಧೆ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಾರಿ 84 ಸಾವಿರ ವಯಸ್ಕರನ್ನು ಅಮೆರಿಕ ಗಡಿಯಲ್ಲಿ ಸೆರೆ ಹಿಡಿಯಲಾಗಿದೆ. 730 ಮಂದಿ ಪೋಷಕರಿಲ್ಲದ ಮಕ್ಕಳು ಕೂಡಾ ಸೆರೆ ಸಿಕ್ಕಿದ್ದಾರೆ ಎಂದು ವಿವರಿಸಿದ್ದಾರೆ.

andolanait

Recent Posts

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

43 mins ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

1 hour ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

1 hour ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

2 hours ago

ಚಾಮುಂಡಿಬೆಟ್ಟಕ್ಕೆ ನಟ ಕಿಚ್ಚ ಸುದೀಪ್‌ ಭೇಟಿ

ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…

3 hours ago