BREAKING NEWS

ಅಮೆರಿಕಕ್ಕೆ ಅಕ್ರಮ ಪ್ರವೇಶ ಯತ್ನ: 97 ಸಾವಿರ ಭಾರತೀಯರ ಬಂಧನ

ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್‌ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ ವಿಭಾಗ (ಯುಸಿಬಿಪಿ) ಅಂಕಿ ಅಂಶ ಬಹಿರಂಗಪಡಿಸಿದೆ.

ದುರ್ಗಮ ಹಾದಿಯಲ್ಲಿ ಇಂಥ ನುಸುಳುವಿಕೆ ಅವಧಿಯಲ್ಲಿ ಜೀವಹಾನಿಯ ಹಲವು ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಭಾರಿ ಸಂಖ್ಯೆಯ ಭಾರತೀಯರು ಈ ಮಾರ್ಗ ಅನುಸರಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. 96917 ಮಂದಿ ಭಾರತೀಯರ ಪೈಕಿ 30100 ಮಂದಿಯನ್ನು ಕೆನಡಾ ಗಡಿಯಲ್ಲಿ ಮತ್ತು 41770 ಮಂದಿಯನ್ನು ಮೆಕ್ಸಿಕೊ ಗಡಿಯಲ್ಲಿ ಪತ್ತೆ ಮಾಡಲಾಗಿದೆ ಎಂದು ಯುಸಿಬಿಪಿ ಸ್ಪಷ್ಟಪಡಿಸಿದೆ.

ಉಳಿದವರನ್ನು ಅಮೆರಿಕಕ್ಕೆ ನುಸುಳಿದ ಬಳಿಕ ಪತ್ತೆ ಮಾಡಲಾಗಿದೆ. 2019-20ರಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸಿದ 19883 ಮಂದಿ ಭಾರತೀಯರನ್ನು ಬಂಧಿಸಲಾಗಿದ್ದರೆ, ಕಳೆದ ವರ್ಷ ಈ ಪ್ರಮಾಣ ಐದು ಪಟ್ಟು ಹೆಚ್ಚಿದೆ.

ಈ ಅಂಕಿ ಅಂಶಗಳು ಕೇವಲ ದಾಖಲಾದ ಪ್ರಕರಣಗಳನ್ನಷ್ಟೇ ಬಿಂಬಿಸುತ್ತವೆ. ವಾಸ್ತವ ಸಂಖ್ಯೆ ಇನ್ನಷ್ಟು ಅಧಿಕ ಎಂದು ಕಾನೂನು ಜಾರಿ ಅಧಿಕಾರಿಗಳು ಹೇಳುತ್ತಾರೆ. “ಇದು ಇಡೀ ವ್ಯವಸ್ಥೆಯ ಒಂದು ತುಣುಕು. ಗಡಿಯಲ್ಲಿ ಒಬ್ಬನನ್ನು ಸೆರೆ ಹಿಡಿಯುವ ಅವಧಿಯಲ್ಲಿ ಕನಿಷ್ಠ 10 ಮಂದಿ ಯಶಸ್ವಿಯಾಗಿ ಅಮೆರಿಕಕ್ಕೆ ನುಸುಳಿರುತ್ತಾರೆ” ಎಂದು ಗುಜರಾತ್‍ನ ಪೊಲೀಸ್ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯವಾಗಿ ಗುಜರಾತ್ ಹಾಗೂ ಪಂಜಾಬ್‍ನ ಜನತೆ ಅಮೆರಿಕದಲ್ಲಿ ನೆಲೆಸಲು ಬಯಸುತ್ತಾರೆ ಎಂದು ಅಕ್ರಮ ನುಸುಳುವಿಕೆ ದಂಧೆ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಾರಿ 84 ಸಾವಿರ ವಯಸ್ಕರನ್ನು ಅಮೆರಿಕ ಗಡಿಯಲ್ಲಿ ಸೆರೆ ಹಿಡಿಯಲಾಗಿದೆ. 730 ಮಂದಿ ಪೋಷಕರಿಲ್ಲದ ಮಕ್ಕಳು ಕೂಡಾ ಸೆರೆ ಸಿಕ್ಕಿದ್ದಾರೆ ಎಂದು ವಿವರಿಸಿದ್ದಾರೆ.

andolanait

Recent Posts

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

8 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

8 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

8 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

9 hours ago

ಕೇರಳ| ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಸ್ಫೋಟ: 13 ಮಂದಿ ಸಾವು

ತಿರುವನಂತಪುರಂ: ಕೇರಳದ ತ್ರಿಶೂರ್‌ ಪುರಂ ಉತ್ಸವಕ್ಕೆ ಸಿಡಿಮದ್ದು ತಯಾರಿಸುತ್ತಿದ್ದ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ.…

9 hours ago

ಹನೂರು| ಆದಿಶಕ್ತಿ ಮಾರಮ್ಮ ಜಾತ್ರೆಯಲ್ಲಿ ಡಿಜೆ ಬಳಕೆಗೆ ಅವಕಾಶ ನೀಡುವಂತೆ ಗ್ರಾಮಸ್ಥರ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಆದಿಶಕ್ತಿ ಮಾರಮ್ಮ ಜಾತ್ರಾ…

9 hours ago