BREAKING NEWS

ಅಮೆರಿಕಕ್ಕೆ ಅಕ್ರಮ ಪ್ರವೇಶ ಯತ್ನ: 97 ಸಾವಿರ ಭಾರತೀಯರ ಬಂಧನ

ಅಹ್ಮದಾಬಾದ್ : ಕಳೆದ ಒಂದು ವರ್ಷದ ಅವಧಿಯಲ್ಲಿ ಅಂದರೆ 2022ರ ಅಕ್ಟೋಬರ್‌ ನಿಂದ 2023ರ ಸೆಪ್ಟೆಂಬರ್ ವರೆಗೆ ಅಮೆರಿಕಕ್ಕೆ ಅಕ್ರಮ ಪ್ರವೇಶ ಪಡೆಯಲು ಯತ್ನಿಸಿದ ದಾಖಲೆ ಸಂಖ್ಯೆಯ 96917 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆ ವಿಭಾಗ (ಯುಸಿಬಿಪಿ) ಅಂಕಿ ಅಂಶ ಬಹಿರಂಗಪಡಿಸಿದೆ.

ದುರ್ಗಮ ಹಾದಿಯಲ್ಲಿ ಇಂಥ ನುಸುಳುವಿಕೆ ಅವಧಿಯಲ್ಲಿ ಜೀವಹಾನಿಯ ಹಲವು ಪ್ರಕರಣಗಳು ವರದಿಯಾಗುತ್ತಿರುವ ನಡುವೆಯೇ ಭಾರಿ ಸಂಖ್ಯೆಯ ಭಾರತೀಯರು ಈ ಮಾರ್ಗ ಅನುಸರಿಸುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. 96917 ಮಂದಿ ಭಾರತೀಯರ ಪೈಕಿ 30100 ಮಂದಿಯನ್ನು ಕೆನಡಾ ಗಡಿಯಲ್ಲಿ ಮತ್ತು 41770 ಮಂದಿಯನ್ನು ಮೆಕ್ಸಿಕೊ ಗಡಿಯಲ್ಲಿ ಪತ್ತೆ ಮಾಡಲಾಗಿದೆ ಎಂದು ಯುಸಿಬಿಪಿ ಸ್ಪಷ್ಟಪಡಿಸಿದೆ.

ಉಳಿದವರನ್ನು ಅಮೆರಿಕಕ್ಕೆ ನುಸುಳಿದ ಬಳಿಕ ಪತ್ತೆ ಮಾಡಲಾಗಿದೆ. 2019-20ರಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸಿದ 19883 ಮಂದಿ ಭಾರತೀಯರನ್ನು ಬಂಧಿಸಲಾಗಿದ್ದರೆ, ಕಳೆದ ವರ್ಷ ಈ ಪ್ರಮಾಣ ಐದು ಪಟ್ಟು ಹೆಚ್ಚಿದೆ.

ಈ ಅಂಕಿ ಅಂಶಗಳು ಕೇವಲ ದಾಖಲಾದ ಪ್ರಕರಣಗಳನ್ನಷ್ಟೇ ಬಿಂಬಿಸುತ್ತವೆ. ವಾಸ್ತವ ಸಂಖ್ಯೆ ಇನ್ನಷ್ಟು ಅಧಿಕ ಎಂದು ಕಾನೂನು ಜಾರಿ ಅಧಿಕಾರಿಗಳು ಹೇಳುತ್ತಾರೆ. “ಇದು ಇಡೀ ವ್ಯವಸ್ಥೆಯ ಒಂದು ತುಣುಕು. ಗಡಿಯಲ್ಲಿ ಒಬ್ಬನನ್ನು ಸೆರೆ ಹಿಡಿಯುವ ಅವಧಿಯಲ್ಲಿ ಕನಿಷ್ಠ 10 ಮಂದಿ ಯಶಸ್ವಿಯಾಗಿ ಅಮೆರಿಕಕ್ಕೆ ನುಸುಳಿರುತ್ತಾರೆ” ಎಂದು ಗುಜರಾತ್‍ನ ಪೊಲೀಸ್ ಅಧಿಕಾರಿಯೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯವಾಗಿ ಗುಜರಾತ್ ಹಾಗೂ ಪಂಜಾಬ್‍ನ ಜನತೆ ಅಮೆರಿಕದಲ್ಲಿ ನೆಲೆಸಲು ಬಯಸುತ್ತಾರೆ ಎಂದು ಅಕ್ರಮ ನುಸುಳುವಿಕೆ ದಂಧೆ ಬಗ್ಗೆ ತನಿಖೆ ನಡೆಸುತ್ತಿರುವ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬಾರಿ 84 ಸಾವಿರ ವಯಸ್ಕರನ್ನು ಅಮೆರಿಕ ಗಡಿಯಲ್ಲಿ ಸೆರೆ ಹಿಡಿಯಲಾಗಿದೆ. 730 ಮಂದಿ ಪೋಷಕರಿಲ್ಲದ ಮಕ್ಕಳು ಕೂಡಾ ಸೆರೆ ಸಿಕ್ಕಿದ್ದಾರೆ ಎಂದು ವಿವರಿಸಿದ್ದಾರೆ.

andolanait

Recent Posts

ಭಾನುವಾರದ ಹಾಡುಪಾಡು | ವಿಯಟ್ಟಾಮಿನಲ್ಲೂ ಹುಡುಗಿಯರೇ ಸ್ಟ್ರಾಂಗೂ ಗುರೂ

ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…

3 mins ago

ಭಾನುವಾರದ ಹಾಡುಪಾಡು | “ಇಲ್ಲ ಕಣ್‌ ಪುಟ್ರಂಗಾ, ಡಿಕೆ ಏನಾರೂ ಮಾಡದ್ರೂ ಮಾಡಬೋದು ಅನಿಸ್ತಾದೆ”

• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್‌ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…

22 mins ago

ಎಲ್‌ಪಿಜಿ ಸಿಲಿಂಡರ್‌ ದರ ಮತ್ತೆ ಏರಿಕೆ ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

ಹೊಸದಿಲ್ಲಿ :  ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…

42 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 7 ಭಾನುವಾರ

3 hours ago

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…

17 hours ago

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್‌

ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್‌ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…

17 hours ago