ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಬಂಧಿಸಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಅತ್ತಿಬೆಲೆ ಅಗ್ನಿ ಅವಘಡಕ್ಕೆ ಅಧಿಕಾರಿಗಳೇ ಹೊಣೆ ಎಂದು ವರದಿ ಬಂದಿತ್ತು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಗಿ ನೀಡಿರುವುದೇ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.
ಮಂಗಳವಾರ ಅಮಾನತಿನ ಬಗ್ಗೆ ಡಿಸಿ, ಎಸ್ಪಿಗೆ ಸಿಎಂ ಸೂಚನೆ ನೀಡಿದ್ದರು. ಇದೀಗ ಸಿಎಂ ಸೂಚನೆ ಬೆನ್ನಲ್ಲೆ ಅಧಿಕಾರಿಗಳ ಅಮಾನತು ಮಾಡಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…