ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.
ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ಶನಿವಾರ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು.
ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ.
ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತ ಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.
ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು.
ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.
ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…