BREAKING NEWS

ಅತ್ತಿಬೆಲೆ ಪಟಾಕಿ ದುರಂತ: ಘಟನಾ ಸ್ಥಳಕ್ಕೆ ಸಿಎಂ-ಡಿಸಿಎಂ ಭೇಟಿ

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.

ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ಶನಿವಾರ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು.

ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ.

ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತ ಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು.

ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

11 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

11 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

11 hours ago