BREAKING NEWS

ಅತ್ತಿಬೆಲೆ ಪಟಾಕಿ ದುರಂತ: ಘಟನಾ ಸ್ಥಳಕ್ಕೆ ಸಿಎಂ-ಡಿಸಿಎಂ ಭೇಟಿ

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ ಸುರೇಶ್, ಮಾಜಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಶಿವಣ್ಣ ಮತ್ತಿತರರು ಜತೆಗಿದ್ದರು.

ಘಟನೆಯ ಪ್ರತಿ ಸ್ಥಳಕ್ಕೂ ಖುದ್ದಾಗಿ ಭೇಟಿ ನೀಡಿದ ಮುಖ್ಯಮಂತ್ರಿಗಳು, ನಷ್ಟದ ಅಂದಾಜುಗಳು ಹಾಗೂ ಇತರ ವಿವರಗಳನ್ನು ಪರಿಶೀಲನೆ ನಡೆಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪರವಾನಗಿ ಪಡೆದು ಪಟಾಕಿ ಮಾರಾಟ ಮಾಡುವುದು ದೀಪಾವಳಿ ಸಂದರ್ಭದಲ್ಲಿ ಕಂಡುಬರುತ್ತದೆ. ಶನಿವಾರ 3 ಗಂಟೆ ಸುಮಾರಿನಲ್ಲಿ ಈ ಗೋದಾಮಿನಲ್ಲಿ ಅಗ್ನಿ ದುರಂತ ನಡೆದಿದೆ. ಇದಕ್ಕೆ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸರಿಯಾದ ಸುರಕ್ಷತಾ ಕ್ರಮ ಮಾಡದಿರುವುದು ಕಾರಣ ಎಂದರು.

ಪಟಾಕಿ ಮಾರಾಟ ಹಾಗೂ ಸಂಗ್ರಹಕ್ಕೆ ಎರಡು ಪರವಾನಗಿಗಳನ್ನು ಪಡೆದಿದ್ದಾರೆ. 2023 ರ ಸೆಪ್ಟೆಂಬರ್ 13 ರಂದು ಒಂದು ಪರವಾನಗಿ ನವೀಕರಣಗೊಂಡಿದ್ದು, ಅದು 2028 ರ ಅಕ್ಟೋಬರ್ 31 ರವರಗೆ ಚಾಲ್ತಿಯಲ್ಲಿರುತ್ತದೆ. ಇನ್ನೊಂದು ಪರವಾನಗಿಯನ್ನು 2021ರ ಜನವರಿ 18 ರಂದು ಪಡೆಯಲಾಗಿದ್ದು, 2026 ರ ಜನವರಿ 28 ರವರೆಗೂ ಚಾಲ್ತಿಯಲ್ಲಿರಲಿದೆ.

ಜಯಮ್ಮ ಅವರಿಗೆ ಸೇರಿದ ಜಾಗವನ್ನು ಬಾಡಿಗೆ ಪಡೆದು ಪಟಾಕಿ ವ್ಯಾಪಾರ ಮಾಡಲಾಗುತ್ತಿತ್ತು. ಮೃತ ಪಟ್ಟವರು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗೆ ಸೇರಿದವರಾಗಿದ್ದು, ಅವರಲ್ಲಿ ಬಹುತೇಕರು ವಿದ್ಯಾರ್ಥಿಗಳಾಗಿದ್ದಾರೆ. ರಜಾ ಅವಧಿಯಲ್ಲಿ ವಿದ್ಯಾರ್ಥಿಗಳು ಸಂಪಾದನೆಗಾಗಿ ಕೆಲಸ ಮಾಡುತ್ತಿದ್ದರು. ಮ್ಯಾನೇಜರ್ ಮಾತ್ರ ಖಾಯಂ ನೌಕರ. ಉಳಿದೆಲ್ಲರೂ ದಿನಗೂಲಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಸಲ್ಲಿಸಿದ್ದರಿಂದ ಪರವಾನಗಿಯನ್ನು ನವೀಕರಣ ಮಾಡಿಕೊಟ್ಟಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿರಪೇಕ್ಷಣಾ ಪತ್ರ ನೀಡಿದವರು ಸ್ಥಳಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕಿತ್ತು. ಇದು ಆಗಿಲ್ಲ. ಜಿಲ್ಲಾಕಾರಿಗಳು ಕೂಡ ಸ್ಥಳಕ್ಕೆ ಭೇಟಿ ನೀಡಿಲ್ಲ. ಹೀಗಾಗಿ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗುತ್ತಿದೆ ಎಂದು ಹೇಳಿದರು.

ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಘಟನೆಯಲ್ಲಿ 14 ಮಂದಿ ಮೃತಪಟ್ಟಿರುವುದರಿಂದ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡ 4 ಜನರಿಗೆ ಉಚಿತ ಚಿಕಿತ್ಸೆ ಕೊಡಿಸಲಾಗುವುದು ಎಂದರು.

andolanait

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

2 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

4 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

5 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

6 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

8 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

8 hours ago