BREAKING NEWS

ಜಯಲಲಿತಾ ಅವರಿಂದ ಜಪ್ತಿ ಮಾಡಿದ್ದ ವಸ್ತುಗಳ ಹರಾಜು: ಪ್ರಾಸಿಕ್ಯೂಟರ್ ನೇಮಕ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್-1 ಕಿರಣ್ ಎಸ್. ಜವಳಿ ಅವರನ್ನು ಪ್ರಕರಣದ ‘ವಿಶೇಷ ಪ್ರಾಸಿಕ್ಯೂಟರ್’ ಆಗಿ ನೇಮಕ ಮಾಡಲಾಗಿದೆ.

ಜಯಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ಬರೆದ ಪತ್ರವನ್ನು ಆಧರಿಸಿ ರಾಜ್ಯ ಕಾನೂನು ಇಲಾಖೆ ಮಾರ್ಚ್ 27ರಂದು ಆದೇಶ ಹೊರಡಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ 4 ವರ್ಷ ಜೈಲು ಮತ್ತು ₹ 100 ಕೋಟಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ‘ಜಪ್ತಿ ಮಾಡಲಾಗಿದ್ದ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು’ ಎಂದು ನಿರ್ದೇಶಿಸಲಾಗಿತ್ತು.

7 ಕೆ.ಜಿ ಚಿನ್ನ, 740 ಚಪ್ಪಲಿ : 7.04 ಕೆ.ಜಿ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೊ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೊ ಡೆಕ್, 24 ಟೂ-ಇನ್ ಒನ್ ಟೇಪ್‌ ರೆಕಾರ್ಡರ್, 1040 ವಿಡಿಯೊ ಕ್ಯಾಸೆಟ್, 3 ಐರನ್ ಲಾಕರ್,

₹ 1,39,202 ನಗದು ಸೇರಿದಂತೆ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಈಗ ಇವುಗಳನ್ನು ವಿಲೇವಾರಿ ಮಾಡಬೇಕಿದೆ.

 

 

 

lokesh

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

3 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

4 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago