ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್ ಎಂದು ಹೆಸರಿಟ್ಟರು.
ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.
ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್ ಸೆಂಟರ್ನಲ್ಲಿ ಪ್ರಧಾನಿ ಮೋದಿ ಹೇಳಿದರು.
ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.
ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.
ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…
ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…
ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…
ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ ಮಡಿಕೇರಿ: ಕುಶಾಲನಗರದ ಬಹು…