BREAKING NEWS

ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು.

ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.

ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

andolanait

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

7 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

8 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

9 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

12 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

13 hours ago