BREAKING NEWS

ಆಗಸ್ಟ್​ 23 ಇನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ: ಪ್ರಧಾನಿ ಮೋದಿ ಘೋಷಣೆ

ಬೆಂಗಳೂರು : ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದ್ದು ಇಡೀ ಮನುಕುಲಕ್ಕೆ ಮಹತ್ವಪೂರ್ಣವಾದದ್ದು, ಆಗಸ್ಟ್ 23ರಂದು ಚಂದ್ರಯಾನ ಯಶಸ್ವಿಯಾದ ದಿನವನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಶಿವಶಕ್ತಿ ಪಾಯಿಂಟ್ : ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ಕರೆಯೋಣ. ಶಿವನಲ್ಲಿ ಮಾನವ ಶಕ್ತಿಯನ್ನು ರೂಪಿಸುವ ಶಕ್ತಿ ಇದೆ. ಚಂದ್ರನ ಮೇಲೂ ತಿರಂಗ ರಾರಾಜಿಸುತ್ತಿದೆ ಎಂದ ಮೋದಿ, ಚಂದ್ರಯಾನ-2 ಪತನ ಸ್ಥಳಕ್ಕೆ ತಿರಂಗ ಪಾಯಿಂಟ್​ ಎಂದು ಹೆಸರಿಟ್ಟರು.

ಈ ತಿರಂಗ ಪಾಯಿಂಟ್​​​ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್​ ಇನ್​ ಇಂಡಿಯಾ ಈಗ ಚಂದ್ರನವರೆಗೂ ತಲುಪಿದೆ ಎಂದು ಖುಷಿಯಿಂದ ಮುಕ್ತಕಂಠದಿಂದ ಇಸ್ರೊ ವಿಜ್ಞಾನಿಗಳನ್ನು ಶ್ಲಾಘಿಸಿ ಬೆಂಗಳೂರಿನ ಇಸ್ರೊ ಕಚೇರಿಯಲ್ಲಿಂದು ಘೋಷಿಸಿದರು.

ರಾಷ್ಟ್ರೀಯ ಬಾಹ್ಯಾಕಾಶ ದಿನ: ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು. ಆಗಸ್ಟ್ 23 ರ ಆ ದಿನ ನನ್ನ ಕಣ್ಣ ಮುಂದೆ ಪ್ರತಿ ಸೆಕೆಂಡ್ ಮತ್ತೆ ಮತ್ತೆ ತಿರುಗುತ್ತಿದೆ, ನಿಮ್ಮ ಸಾಧನೆಯನ್ನು ಎಷ್ಟೇ ಕೊಂಡಾಡಿದರೂ ಅದು ಕಡಿಮೆಯೇ. ಚಂದ್ರನ ಮೇಲೆ ಪ್ರಜ್ಞಾನ್​ ಪರಾಕ್ರಮ ಕಂಡು ಖುಷಿಯಾಗಿದೆ. ಇಡೀ ವಿಶ್ವವೇ ಭಾರತದ ವಿಜ್ಞಾನ, ತಂತ್ರಜ್ಞಾನವನ್ನು ಒಪ್ಪಿಕೊಂಡಿದೆ ಎಂದು ಇಸ್ರೋ ಕಮಾಂಡ್​ ಸೆಂಟರ್​ನಲ್ಲಿ ಪ್ರಧಾನಿ ಮೋದಿ ಹೇಳಿದರು.

ವಿಶ್ವದ ದೊಡ್ಡ ದೊಡ್ಡ ಸಮಸ್ಯೆಗಳಿಗೆ ಭಾರತ ಪರಿಹಾರ ಕಂಡಿದೆ. ನಿಮ್ಮೆಲ್ಲರ ಈ ಸಾಧನೆ ಇತರರಿಗೆ ಸ್ಪೂರ್ತಿದಾಯಕವಾಗಿದೆ. ನೀವೆಲ್ಲರೂ ಸೇರಿ ಭಾರತದ ಕನಸನ್ನು ನನಸು ಮಾಡಿದ್ದೀರಿ. ನಾನು ವಿದೇಶದಲ್ಲಿದ್ದೆ, ಆದರೆ ನನ್ನ ಹೃದಯವು ಎಲ್ಲಾ ಸಮಯದಲ್ಲೂ ಸಂಪೂರ್ಣವಾಗಿ ನಿಮ್ಮೊಂದಿಗೆ ಇತ್ತು ಎಂದು ವಿಜ್ಞಾನಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

ತಿರಂಗಾ: ಚಂದ್ರಯಾನ-2 ಪತನಗೊಂಡ ಸ್ಥಳಕ್ಕೆ ‘ತಿರಂಗಾ’ ಎಂದು ಹೆಸರಿಸೋಣ. ಭಾರತ ಚಂದ್ರಯಾನ ಹಾಗೂ ಮಂಗಳಯಾನದಲ್ಲಿ ಯಶಸ್ಸನ್ನು ಗಳಿಸಿ ಮಾನವಸಹಿತ ಗಗನಯಾನಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಮೂಲಕ ಭಾರತೀಯ ನೆಲ, ಇಲ್ಲಿನ ಜನರ ಮನ ಹಾಗೂ ಚಂದ್ರನಲ್ಲೂ ತಿರಂಗಾ ಮನೆ ಮಾಡಿದೆ ಎಂದು ಅವರು ಹೇಳಿದರು.

ಈ ಯಶಸ್ಸು ಭಾರತದ ವೈಜ್ಞಾನಿಕ ಶಂಕನಾದವಾಗಿದೆ. ಚಂದ್ರಯಾನದಿಂದ ಮನುಕುಲ ಅಭಿವೃದ್ಧಿ ಸಾಧ್ಯವಿದೆ. ಹಿಮಾಲಯದಿಂದ ಕನ್ಯಾಕುಮಾರಿ ವರೆಗೂ ಜೋಡಿಸುವ ಸಾಮರ್ಥ್ಯ ಇದೆ. ಶಿವನಲ್ಲಿ ಮಾನವನ ಅಭಿವೃದ್ಧಿ ಇದೆ. ಚಂದ್ರಯಾನ-3 ರ ಯಶಸ್ಸಿನಿಂದಾಗಿ ಮೇಕ್ ಇನ್ ಇಂಡಿಯಾದ ಮೇಲೆ ಬಲವಾದ ನಂಬಿಕೆ ಮೂಡುತ್ತಿದೆ ಎಂದು ಮೋದಿ ಅಭಿಪ್ರಾಯಪಟ್ಟರು.

andolanait

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

1 hour ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

1 hour ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

1 hour ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

1 hour ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago