BREAKING NEWS

ಚಾಟ್‌ಜಿಪಿಟಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಆಸೀಸ್ ಮೇಯರ್

ಆಸ್ಟ್ರೇಲಿಯಾ : ಚಾಟ್‌ಜಿಪಿಟಿಯು ತಮ್ಮನ್ನು ‘ಅಪರಾಧಿ‘ ಎಂದು ಕರೆದಿರುವುದರ ವಿರುದ್ಧ ಆಕ್ರೋಶಗೊಂಡ ಆಸ್ಟ್ರೇಲಿಯಾದ ಮೇಯರ್‌ ಒಬ್ಬರು ಚಾಟ್‌ಜಿಪಿಟಿ ತಂತ್ರಾಂಶವನ್ನು ರೂಪಿಸಿದ ‘ಓಪನ್‌ ಎಐ’ ಕಂಪೆನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.
ಆಸ್ಟ್ರೇಲಿಯಾದ ಹೆಪ್ಬರ್ನ್ ಶೈರ್‌ನ ಮೇಯರ್‌ ಆಗಿರುವ ಬ್ರಿಯಾನ್‌ ಹುಡ್‌ ಚಾಟ್‌ಜಿಪಿಟಿ (ಎಐ ಆಧಾರಿತ ಚಾಟಿಂಗ್ ವ್ಯವಸ್ಥೆ) ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಬ್ರಿಯಾನ್‌ ಹುಡ್‌ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾಗಿ ಚಾಟ್‌ಜಿಪಿಟಿ ಸುಳ್ಳು ಮಾಹಿತಿ ನೀಡಿರುವುದೇ ಈ ಬೆಳವಣಿಗೆಗೆ ಕಾರಣವಾಗಿದೆ. ತಕ್ಷಣ ಮಾಹಿತಿ ಸರಿಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಈಗಾಗಲೇ ಬ್ರಿಯಾನ್‌ ‘ಓಪನ್‌ ಎಐ‘ಗೆ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಮೊಕದ್ದಮೆ ಹೂಡಿದ್ದೇ ಆದರೆ, ವಿಶ್ವದಲ್ಲಿಯೇ ವ್ಯಕ್ತಿಯೊಬ್ಬರು ಕೃತಕ ಬುದ್ದಿಮತ್ತೆ (ಎಐ) ವಿರುದ್ಧ ಹೂಡಿದ ಮೊದಲ ಮಾನನಷ್ಟ ಮೊಕದ್ದಮೆ ಇದಾಗಲಿದೆ.

ಚಾಟ್‌ಜಿಪಿಟಿಯಲ್ಲಿ ಬ್ರಿಯಾನ್‌ ಹುಡ್‌ ಬಗ್ಗೆ ಮಾಹಿತಿ ಕೇಳಿದಾಗ, ’2000ನೇ ಇಸವಿಯಲ್ಲಿ ಬ್ರಿಯಾನ್‌ ಹುಡ್‌ ‘ಫಾರಿನ್‌ ಬ್ರೈಬರಿ‘ ಹಗರಣದಲ್ಲಿ (ವಿದೇಶಿ ಸಾರ್ವಜನಿಕ ಅಧಿಕಾರಿಗೆ ಲಂಚ ನೀಡಿ ಪ್ರಯೋಜನ ಪಡೆಯುವುದು) ಅಪರಾಧಿ ಎಂದು ಸಾಬೀತಾಗಿ ಜೈಲು ಶಿಕ್ಷೆ ಅನುಭವಿಸಿದ್ದಾರೆ‘ ಎಂದು ಉತ್ತರಿಸಿತ್ತು. ಬ್ರಿಯಾನ್‌ ಸ್ನೇಹಿತರು ಈ ಮಾಹಿತಿಯನ್ನು ಅವರಿಗೆ ತಿಳಿಸಿದ್ದು, ತಕ್ಷಣ ಎಚ್ಚೆತ್ತ ಬ್ರಿಯಾನ್‌ ಟೆಕ್‌ ದೈತ್ಯ ‘ಚಾಟ್‌ಜಿಪಿಟಿ‘ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಬ್ರಿಯಾನ್‌ ಪರ ವಕೀಲ ಚಾಟ್‌ಜಿಪಿಟಿಯ ಮಾಲೀಕ ಸಂಸ್ಥೆ ‘ಓಪನ್‌ ಎಐ‘ಗೆ ಇ–ಮೇಲ್‌ ಮುಖಾಂತರ ನೋಟಿಸ್‌ ನೀಡಿದ್ದು, 28 ದಿನದೊಳಗೆ ಮಾಹಿತಿ ಸರಿಪಡಿಸುವಂತೆ ಸೂಚಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ಕ್ರಮ ಎದುರಿಸುವಂತೆ ತಿಳಿಸಿದ್ದಾರೆ. ವಕೀಲರ ನೋಟಿಸ್‌ಗೆ ಓಪನ್‌ ಎಐ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

‘ಚಾಚ್‌ಜಿಪಿಟಿಯಂತಹ ಕೃತಕ ಬುದ್ದಿಮತ್ತೆ ತಂತ್ರಜ್ಞಾನಗಳು ಹೇಗೆ ಒಬ್ಬ ಮನುಷ್ಯನ ವ್ಯಕ್ತಿತ್ವವನ್ನು ಹಾಳು ಮಾಡಬಹುದು ಎಂಬುವುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ‘ ಎಂದು ಬ್ರಿಯಾನ್‌ ಪರ ವಕೀಲ ಜೇಮ್ಸ್ ನಾಟನ್‌ ಬೇಸರ ವ್ಯಕ್ತಪಡಿಸಿದ್ದಾರೆ.

lokesh

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago