BREAKING NEWS

ಚಾಟ್‌ಜಿಪಿಟಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾದ ಆಸೀಸ್ ಮೇಯರ್

ಆಸ್ಟ್ರೇಲಿಯಾ : ಚಾಟ್‌ಜಿಪಿಟಿಯು ತಮ್ಮನ್ನು ‘ಅಪರಾಧಿ‘ ಎಂದು ಕರೆದಿರುವುದರ ವಿರುದ್ಧ ಆಕ್ರೋಶಗೊಂಡ ಆಸ್ಟ್ರೇಲಿಯಾದ ಮೇಯರ್‌ ಒಬ್ಬರು ಚಾಟ್‌ಜಿಪಿಟಿ ತಂತ್ರಾಂಶವನ್ನು ರೂಪಿಸಿದ ‘ಓಪನ್‌ ಎಐ’ ಕಂಪೆನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ.
ಆಸ್ಟ್ರೇಲಿಯಾದ ಹೆಪ್ಬರ್ನ್ ಶೈರ್‌ನ ಮೇಯರ್‌ ಆಗಿರುವ ಬ್ರಿಯಾನ್‌ ಹುಡ್‌ ಚಾಟ್‌ಜಿಪಿಟಿ (ಎಐ ಆಧಾರಿತ ಚಾಟಿಂಗ್ ವ್ಯವಸ್ಥೆ) ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ. ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಬ್ರಿಯಾನ್‌ ಹುಡ್‌ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾಗಿ ಚಾಟ್‌ಜಿಪಿಟಿ ಸುಳ್ಳು ಮಾಹಿತಿ ನೀಡಿರುವುದೇ ಈ ಬೆಳವಣಿಗೆಗೆ ಕಾರಣವಾಗಿದೆ. ತಕ್ಷಣ ಮಾಹಿತಿ ಸರಿಪಡಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಈಗಾಗಲೇ ಬ್ರಿಯಾನ್‌ ‘ಓಪನ್‌ ಎಐ‘ಗೆ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಮೊಕದ್ದಮೆ ಹೂಡಿದ್ದೇ ಆದರೆ, ವಿಶ್ವದಲ್ಲಿಯೇ ವ್ಯಕ್ತಿಯೊಬ್ಬರು ಕೃತಕ ಬುದ್ದಿಮತ್ತೆ (ಎಐ) ವಿರುದ್ಧ ಹೂಡಿದ ಮೊದಲ ಮಾನನಷ್ಟ ಮೊಕದ್ದಮೆ ಇದಾಗಲಿದೆ.

ಚಾಟ್‌ಜಿಪಿಟಿಯಲ್ಲಿ ಬ್ರಿಯಾನ್‌ ಹುಡ್‌ ಬಗ್ಗೆ ಮಾಹಿತಿ ಕೇಳಿದಾಗ, ’2000ನೇ ಇಸವಿಯಲ್ಲಿ ಬ್ರಿಯಾನ್‌ ಹುಡ್‌ ‘ಫಾರಿನ್‌ ಬ್ರೈಬರಿ‘ ಹಗರಣದಲ್ಲಿ (ವಿದೇಶಿ ಸಾರ್ವಜನಿಕ ಅಧಿಕಾರಿಗೆ ಲಂಚ ನೀಡಿ ಪ್ರಯೋಜನ ಪಡೆಯುವುದು) ಅಪರಾಧಿ ಎಂದು ಸಾಬೀತಾಗಿ ಜೈಲು ಶಿಕ್ಷೆ ಅನುಭವಿಸಿದ್ದಾರೆ‘ ಎಂದು ಉತ್ತರಿಸಿತ್ತು. ಬ್ರಿಯಾನ್‌ ಸ್ನೇಹಿತರು ಈ ಮಾಹಿತಿಯನ್ನು ಅವರಿಗೆ ತಿಳಿಸಿದ್ದು, ತಕ್ಷಣ ಎಚ್ಚೆತ್ತ ಬ್ರಿಯಾನ್‌ ಟೆಕ್‌ ದೈತ್ಯ ‘ಚಾಟ್‌ಜಿಪಿಟಿ‘ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಈ ವಿಷಯಕ್ಕೆ ಸಂಬಂಧಪಟ್ಟಂತೆ ಬ್ರಿಯಾನ್‌ ಪರ ವಕೀಲ ಚಾಟ್‌ಜಿಪಿಟಿಯ ಮಾಲೀಕ ಸಂಸ್ಥೆ ‘ಓಪನ್‌ ಎಐ‘ಗೆ ಇ–ಮೇಲ್‌ ಮುಖಾಂತರ ನೋಟಿಸ್‌ ನೀಡಿದ್ದು, 28 ದಿನದೊಳಗೆ ಮಾಹಿತಿ ಸರಿಪಡಿಸುವಂತೆ ಸೂಚಿಸಿದ್ದಾರೆ. ಇಲ್ಲವಾದಲ್ಲಿ ಮುಂದಿನ ಕ್ರಮ ಎದುರಿಸುವಂತೆ ತಿಳಿಸಿದ್ದಾರೆ. ವಕೀಲರ ನೋಟಿಸ್‌ಗೆ ಓಪನ್‌ ಎಐ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ರಾಯಿಟರ್ಸ್‌ ವರದಿ ಮಾಡಿದೆ.

‘ಚಾಚ್‌ಜಿಪಿಟಿಯಂತಹ ಕೃತಕ ಬುದ್ದಿಮತ್ತೆ ತಂತ್ರಜ್ಞಾನಗಳು ಹೇಗೆ ಒಬ್ಬ ಮನುಷ್ಯನ ವ್ಯಕ್ತಿತ್ವವನ್ನು ಹಾಳು ಮಾಡಬಹುದು ಎಂಬುವುದಕ್ಕೆ ಇದೊಂದು ಉತ್ತಮ ಉದಾಹರಣೆಯಾಗಿದೆ‘ ಎಂದು ಬ್ರಿಯಾನ್‌ ಪರ ವಕೀಲ ಜೇಮ್ಸ್ ನಾಟನ್‌ ಬೇಸರ ವ್ಯಕ್ತಪಡಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago