BREAKING NEWS

6ನೇ ಟ್ರೋಫಿ ಗೆ ಮುತ್ತಿಟ್ಟ ಆಸ್ಟ್ರೇಲಿಯಾ: ಭಾರತಕ್ಕೆ ಆಘಾತ

ಅಹ್ಮದಾಬಾದ್ : ಟ್ರಾವಿಸ್ ಹೆಡ್ ಅವರ ಆಕರ್ಷಕ ಶತಕ ನೆರವಿನಿಂದ ಭಾರತ ತಂಡವನ್ನು ಬಗ್ಗು ಬಡಿದ ಆಸ್ಟ್ರೇಲಿಯಾ ವರ್ಲ್ಡ್ ಚಾಂಪಿಯನ್ ಆಗಿ ಹೊರ ಹೊಮ್ಮಿದರು.

ಆ ಮೂಲಕ 6ನೇ ಬಾರಿ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಭಾರತ ನೀಡಿದ ನೀಡಿದ 240 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 43 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ಬಾರಿಸಿ 6ವಿಕೆಟ್ ಗಳ ಗೆಲುವು ಪಡೆಯಿತು.

ಟ್ರಾವಿಸ ಹೆಡ್ ಅಜೇಯ ಶತಕ ಗಳಿಸಿದರೆ, ಮರ್ನುಸ್ ಅರ್ಧ ಶತಕ ಸಿಡಿಸಿ ಆಸೀಸ್ ಗೆಲುವಿಗೆ ಕಾರಣರಾದರು.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರೆಯಲಿಲ್ಲ. 4 ರನ್ ಗಳಿಸಿ ಗಿಲ್ ಸ್ಟಾರ್ಕ್ ಗೆ ವಿಕೆಟ್ ಒಪ್ಪಿಸಿದರು, ನಂತರ ಬಂದ ಶ್ರೇಯಸ್ ಅಯ್ಯರ್ (4) ಬಂದ ದಾರಿಯಲ್ಲೇ ಹೊರ ನಡೆದರು. ನಾಯಕ ರೋಹಿತ್ ಶರ್ಮಾ 3 ಸಿಕ್ಸರ್ ಹಾಗೂ ಫೋರ್ ಸೇರಿ 47ರನ್ ಗಳಿಸಿ ತಂಡ ಬಿಗ್ ಸ್ಕೋರ್ ಮಾಡುವ ಮುನ್ಸೂಚನೆ ನೀಡಿ ನಿರ್ಗಮಿಸಿದರು.

ಬಳಿಕ ಒಂದಾದ ವಿರಾಟ್ ಕೊಹ್ಲಿ ಮತ್ತು ಕನ್ನಡಿಗ ರಾಹುಲ್ ಭಾರತ ತಂಡ 240ರನ್ ಗಡಿ ದಾಟಿಸಲು ಸಹಾಯ ಮಾಡಿದರು.

ಅರ್ಧ ಶತಕ ಜೊತೆಯಾಟ ನೀಡಿದ ಕೊಹ್ಲಿ ಮತ್ತು ರಾಹುಲ್ ತಂಡಕ್ಕೆ ಅರ್ಹ ಹೋರಾಟದ ಮೊತ್ತವನ್ನು ದಾಖಲಿಸಿತು. 63 ಎಸೆತಗಳಲ್ಲಿ 4 ಬೌಂಡರಿ ಸಹಿತ ಕೊಹ್ಲಿ 54ರನ್ ಗಳಿಸಿದರೆ, ಕನ್ನಡಿಗ ಕೆ ಎಲ್ ರಾಹುಲ್ 107 ಎಸೆತಗಳಲ್ಲಿ 1 ಬೌಂಡರಿ ಸಹಿತ 66 ರನ್ ಗಳಿಸಿದರು. ಈ ಇಬ್ಬರು ಆಟಗಾರರ ಪತನದ ನಂತರ ಬೇರೆ ಯಾರಿಂದಲೂ ನಿರೀಕ್ಷಿತ ಪ್ರದರ್ಶನ ಕಂಡು ಬರಲಿಲ್ಲ.

ಸೂರ್ಯ ಕುಮಾರ್ ಯಾದವ್ 18, ಕುಲದೀಪ್ ಯಾದವ್ 10 ಮತ್ತು ಸಿರಾಜ್ 9 ರನ್ ಗಳಿಸಿದರು.
ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಭಾರತವನ್ನು ಕಟ್ಟಿ ಹಾಕುವಲ್ಲಿ ಸಫಲರಾದರು. ವೇಗಿ ಸ್ಟಾರ್ಕ್ 10 ಓವರ್ ಬೌಲ್ ಮಾಡಿ 55 ರನ್ ನೀಡಿ 3 ವಿಕೆಟ್ ಪಡೆದರು. ನಾಯಕ ಕಮಿನ್ಸ್ 2 ಹಾಗೂ ಹೇಜಲ್ವುಡ್ 2 ವಿಕೆಟ್ ಪಡೆದರು.

ಭಾರತ ನೀಡಿದ 240 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಆರಂಭಿಕ ಆಘಾತ ಅನುಭವಿಸಿದರು. ವಾರ್ನರ್ 7 ರನ್ ಬಾರಿಸಿ ಶಮಿಗೆ ವಿಕೆಟ್ ಒಪ್ಪಿಸಿದರು. ಮಿಚೆಲ್ ಮಾರ್ಷ್ ಅಬ್ಬರದ ಮುನ್ಸೂಚನೆ ನೀಡಿದರು. 15 ರನ್ ನೀಡಿ ಹೊರ ನಡೆದರು.

ನಂತರ ಜೊತೆಯಾದ ಹೆಡ್ ಹಾಗೂ ಮಾರ್ನುಸ್ ಮುರಿಯದ ಜೊತೆಯಾಟ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಹೆಡ್ 119 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್ ಮೂಲಕ 137 ರನ್ ಗಳಿಸಿ ತಂಡದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದರು. ಮಾರ್ನುಸ್ ಲ್ಯಮಿಚೆನ್ನೆ 110 ಎಸೆತಗಳಲ್ಲಿ 4 ಬೌಂಡರಿ ಸಹಿತ 58 ರನ್ ಬಾರಿಸಿದರು.
ಕೊನೆಯಲ್ಲಿ ಬಂದ ಮ್ಯಾಕ್ಸ್ವೆಲ್ ವಿನ್ನಿಂಗ್ ರನ್ ಬಾರಿಸಿದರು.

ಪಂದ್ಯ ಶ್ರೇಷ್ಠ,: ಟ್ರಾವಿಸ್ ಹೆಡ್

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago