BREAKING NEWS

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ತಂಡದ ಆಟಗಾರ

ನವದೆಹಲಿ : ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿರುವುದು ಇದೀಗ ಜನರ ಗೆಂಗಣ್ಣಿಗೆ ಗುರಿಯಾಗಿದೆ. ಸಧ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಚೆಲ್‌ ಅವರ ಈ ನಡೆಯನ್ನು ಜನ ತೀವ್ರವಾಗಿ ಖಂಸುತ್ತಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಇನ್ನು ಈ ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದಾರೆ.

ನೆನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವರ್ಲ್ಡ್‌ಕಪ್‌ ಏಕದಿನ ಕ್ರಿಕೇಟ್‌ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ಮತ್ತೊಮ್ಮೆ ಮುಗ್ಗರಿಸಿದ್ದು, ತವರಿನಲ್ಲಿ ಎರಡನೇ ಬಾರಿಗೆ ಹಾಗೂ ವರ್ಲ್ಡ್‌ಕಪ್‌ ನಲ್ಲಿ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು. ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

lokesh

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago