BREAKING NEWS

ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ತಂಡದ ಆಟಗಾರ

ನವದೆಹಲಿ : ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ವರ್ಲ್ಡ್‌ ಕಪ್‌ಗೆ ಆಸ್ಟ್ರೇಲಿಯಾ ಗೆಲುವಿನ ಮುತ್ತಿಟ್ಟ ಬೆನ್ನಲ್ಲೇ ತಂಡದ ಆಟಗಾರ ಮಿಚೇಲ್‌ ಮಾರ್ಷ್‌, ವರ್ಲ್ಡ್‌ ಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಕುಳಿತಿರುವುದು ಇದೀಗ ಜನರ ಗೆಂಗಣ್ಣಿಗೆ ಗುರಿಯಾಗಿದೆ. ಸಧ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಮಿಚೆಲ್‌ ಅವರ ಈ ನಡೆಯನ್ನು ಜನ ತೀವ್ರವಾಗಿ ಖಂಸುತ್ತಿದ್ದು, ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಫೋಟೋದಲ್ಲಿ ಮಿಚೆಲ್‌ ಅವರು ಎರಡೂ ಕಾಲುಗಳನ್ನು ವರ್ಲ್ಡ್‌ಕಪ್‌ ಟ್ರೋಫಿಯ ಮೇಲಿಟ್ಟು ಯಾವುದೋ ಪಾನೀಯವನ್ನು ಕೈಯಲ್ಲಿ ಹಿಡಿದುಕೊಂಡಿದ್ದಾರೆ. ಇನ್ನು ಈ ಫೋಟೋವನ್ನು ತಂಡದ ನಾಯಕ ಕಮ್ಮಿನ್ಸ್‌ ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿದ್ದಾರೆ. ಇದನ್ನು ಗಮನಿಸಿದ ನೆಟ್ಟಿಗರು ಮಿಚೆಲ್‌ ಅವರು ವರ್ಲ್ಡ್‌ಕಪ್‌ ಗೆ ಅಗೌರವ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಫೋಟೋ ಬಗ್ಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದ್ದಂತೆ ಕಮ್ಮಿನ್ಸ್‌ ಅವರು ತಮ್ಮ ಪೊಸ್ಟನ್ನು ಡಿಲೀಟ್‌ ಮಾಡಿದ್ದಾರೆ.

ನೆನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆದ ವರ್ಲ್ಡ್‌ಕಪ್‌ ಏಕದಿನ ಕ್ರಿಕೇಟ್‌ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ಮತ್ತೊಮ್ಮೆ ಮುಗ್ಗರಿಸಿದ್ದು, ತವರಿನಲ್ಲಿ ಎರಡನೇ ಬಾರಿಗೆ ಹಾಗೂ ವರ್ಲ್ಡ್‌ಕಪ್‌ ನಲ್ಲಿ ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಅವಕಾಶದಿಂದ ವಂಚಿತವಾಯಿತು. ವರ್ಲ್ಡ್‌ ಕಪ್‌ 2023ರಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಬಗ್ಗುಬಡಿದು ಗೆಲುವಿನ ನಗೆ ಬೀರಿತ್ತು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ತಂಡದ ಆಟಗಾರನ ವಿರುದ್ಧ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

lokesh

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

5 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

15 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

20 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

20 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

20 hours ago