BREAKING NEWS

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯನೂರು ಮಂಜುನಾಥ್ ನೇಮಕ

ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು  ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.

andolanait

Recent Posts

ಮಡಿಕೇರಿ | ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌ ; ತಪ್ಪಿದ ಭಾರೀ ಅನಾಹುತ

ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…

32 mins ago

ಪ್ರೇಯಸಿಯ ಕೊಂದು, ಶವವನ್ನು ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ನೌಕಾಪಡೆ ಅಧಿಕಾರಿ!

ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…

47 mins ago

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

3 hours ago