ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…