ಬೆಂಗಳೂರು : ವಿಧಾನಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಆಯನೂರು ಮಂಜುನಾಥ್ ಅವರು ದೃಶ್ಯ ಮಾಧ್ಯಮ, ಮುದ್ರಣ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ರಾಜಕೀಯ ಸಾಮಾಜಿಕ ವಿಷಯಗಳ ಬಗ್ಗೆ ಚರ್ಚೆಯಲ್ಲಿ ಹೆಚ್ಚು ಪ್ರಚಾರದಲ್ಲಿರುವುದನ್ನು ಗಮನಿಸಿ ಕಾಂಗ್ರೆಸ್ ಪಕ್ಷದ ವಿಚಾರಧಾರಣೆಗಳನ್ನು ಮತ್ತು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಮಾಧ್ಯಮಗಳಲ್ಲಿ ಬಿಂಬಿಸಲು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಆಯನೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಜೆಡಿಎಸ್ ವಿಧಾನಸಭೆ ಚುನಾವಣೆಗೆ ಟಿಕೆಟ್ ನೀಡಿತ್ತು. ಆದರೆ, ಮಂಜುನಾಥ್ ಸೋಲನುಭವಿಸಿದರು. ಬಳಿಕ ಕಳೆದ ಆಗಸ್ಟ್ 24ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಸೇರಿದ ಬೆನ್ನಲ್ಲೇ ಆಯನೂರು ಮಂಜುನಾಥ್ ಅವರಿಗೆ ಪಕ್ಷ ಉನ್ನತ ಸ್ಥಾನ ಕೊಟ್ಟಿದೆ.
ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…
ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…
ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…