ಬೆಂಗಳೂರು : ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಮಧು ಬಂಗಾರಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇದ್ದರು.
ಬಳಿಕ ಮಾತನಾಡಿದ ಆಯನೂರು ಮಂಜುನಾಥ್, ʼʼಕಾರ್ಮಿಕರ ಹೋರಾಟದ ಹಿನ್ನಲೆಯಿಂದ ಬಂದವನು ನಾನು. ಇವರ ಯೋಜನೆಗಳನ್ನು ನೋಡಿ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ನಾನು ಮತ್ತು ನನ್ನ ಗೆಳೆಯರು ಪಕ್ಷಕ್ಕಾಗಿ ಕೆಲಸ ಮಾಡುತ್ತೇವೆʼʼ ಎಂದು ಹೇಳಿದರು.
ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಆಯನೂರು ಮಂಜುನಾಥ್
ವಿಧಾನಸಭೆಗೆ ಕಾಂಗ್ರೆಸ್ನಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದ ಆಯನೂರು ಮಂಜುನಾಥ್ ಅದಕ್ಕಾಗಿ ಬಿಜೆಪಿ ಸದಸ್ಯತ್ವ ಮತ್ತು ವಿಧಾನ ಪರಿಷತ್ನ ತಮ್ಮ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದರು. ಕೆಪಿಸಿಸಿ ಮಟ್ಟದಲ್ಲಿ ಒಪ್ಪಿಗೆ ಸಿಕ್ಕರೂ ಎಐಸಿಸಿಯಲ್ಲಿ ಅದಕ್ಕೆ ತಡೆ ಬಿದ್ದಿತ್ತು. ಹೀಗಾಗಿ ಕೊನೆಗೆ ಜೆಡಿಎಸ್ ಸೇರಿ ಚುನಾವಣೆಗೆ ಸ್ಪರ್ಧಿಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…