BREAKING NEWS

ವಿಶ್ವಕಪ್‌ನಲ್ಲಿ ಪಾಕ್ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್‌ ಅಜಮ್‌

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಾಕ್‌ಔಟ್‌ ಹಂತ ತಲುಪಿದ್ದು, ಭಾರತ, ಸೌತ್‌ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ತಲುಪಿವೆ. ಟೂರ್ನಿಯಲ್ಲಿ ಭಾಗವಹಿಸಿದ್ದ ಒಟ್ಟು ಹತ್ತು ತಂಡಗಳ ಪೈಕಿ ಈ 4 ತಂಡಗಳು ಸೆಮೀಸ್ ತಲುಪಿದ್ದು ಉಳಿದ 6 ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದವು.

ಇನ್ನು ಈ ಬಾರಿಯ ವಿಶ್ವಕಪ್‌ ಟೂರ್ನಿ ಆರಂಭವಾಗುವ ಮುನ್ನವೇ ಸೆಮಿಫೈನಲ್‌ ತಲುಪಬಹುದಾದ ತಂಡ ಎಂದು ಹಲವರಿಂದ ಊಹಿಸಲ್ಪಟ್ಟಿದ್ದ ಪಾಕಿಸ್ತಾನ ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬೀಳುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿತ್ತು.

ಒಟ್ಟು 9 ಲೀಗ್‌ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ ತಂಡ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದು ಸೆಮಿಫೈನಲ್‌ ಅರ್ಹತೆ ಪಡೆದುಕೊಳ್ಳಲಾಗದೇ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹೀಗೆ ಟೂರ್ನಿಯಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಜಮ್‌ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಪಾಕಿಸ್ತಾನ ತಂಡವನ್ನು ಎಲ್ಲಾ ಮೂರೂ ಮಾದರಿಯಲ್ಲಿಯೂ ಮುನ್ನಡೆಸುತ್ತಿದ್ದ ಬಾಬರ್‌ ಅಜಮ್‌ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ್ದು ಎಲ್ಲಾ ಮಾದರಿಯಲ್ಲಿಯೂ ಆಟಗಾರನಾಗಿ ಕಣಕ್ಕಿಳಿಯುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಘೋಷಿಸುವ ಸಮಯದಲ್ಲಿ ಮಾತಾನಾಡಿರುವ ಬಾಬರ್‌ ಅಜಮ್‌ “2019ರಲ್ಲಿ ಪಾಕಿಸ್ತಾನವನ್ನು ಮುನ್ನಡೆಸಲು ಪಿಸಿಬಿಯಿಂದ ಕರೆ ಬಂದ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೈದಾನದ ಹೊರಗೆ ಮತ್ತು ಮೈದಾನದ ಒಳಗೆ ಅನೇಕ ಏಳು ಬೀಳುಗಳನ್ನು ಕಂಡಿದ್ದೇನೆ. ಆದರೆ ತುಂಬು ಹೃದಯದಿಂದ ಕ್ರಿಕೆಟ್‌ ಜಗತ್ತಿನಲ್ಲಿ ಪಾಕಿಸ್ತಾನದ ಹೆಮ್ಮೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದ್ದೇನೆ” ಎಂದು ಬಾಬರ್‌ ಅಜಮ್‌ ಹೇಳಿಕೆ ನೀಡಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಬಾಬರ್‌ ಅಜಮ್‌ “ಇಂದು ನಾನು ಪಾಕಿಸ್ತಾನದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ ಆದರೆ ಈ ಕರೆಗೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಎಲ್ಲಾ ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸಲು ಸಿದ್ಧನಿದ್ದೇನೆ, ಈ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ. 

andolana

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

42 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

51 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago