BREAKING NEWS

ವಿಶ್ವಕಪ್‌ನಲ್ಲಿ ಪಾಕ್ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್‌ ಅಜಮ್‌

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಾಕ್‌ಔಟ್‌ ಹಂತ ತಲುಪಿದ್ದು, ಭಾರತ, ಸೌತ್‌ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ತಲುಪಿವೆ. ಟೂರ್ನಿಯಲ್ಲಿ ಭಾಗವಹಿಸಿದ್ದ ಒಟ್ಟು ಹತ್ತು ತಂಡಗಳ ಪೈಕಿ ಈ 4 ತಂಡಗಳು ಸೆಮೀಸ್ ತಲುಪಿದ್ದು ಉಳಿದ 6 ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದವು.

ಇನ್ನು ಈ ಬಾರಿಯ ವಿಶ್ವಕಪ್‌ ಟೂರ್ನಿ ಆರಂಭವಾಗುವ ಮುನ್ನವೇ ಸೆಮಿಫೈನಲ್‌ ತಲುಪಬಹುದಾದ ತಂಡ ಎಂದು ಹಲವರಿಂದ ಊಹಿಸಲ್ಪಟ್ಟಿದ್ದ ಪಾಕಿಸ್ತಾನ ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬೀಳುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿತ್ತು.

ಒಟ್ಟು 9 ಲೀಗ್‌ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ ತಂಡ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದು ಸೆಮಿಫೈನಲ್‌ ಅರ್ಹತೆ ಪಡೆದುಕೊಳ್ಳಲಾಗದೇ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹೀಗೆ ಟೂರ್ನಿಯಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಜಮ್‌ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಪಾಕಿಸ್ತಾನ ತಂಡವನ್ನು ಎಲ್ಲಾ ಮೂರೂ ಮಾದರಿಯಲ್ಲಿಯೂ ಮುನ್ನಡೆಸುತ್ತಿದ್ದ ಬಾಬರ್‌ ಅಜಮ್‌ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ್ದು ಎಲ್ಲಾ ಮಾದರಿಯಲ್ಲಿಯೂ ಆಟಗಾರನಾಗಿ ಕಣಕ್ಕಿಳಿಯುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಘೋಷಿಸುವ ಸಮಯದಲ್ಲಿ ಮಾತಾನಾಡಿರುವ ಬಾಬರ್‌ ಅಜಮ್‌ “2019ರಲ್ಲಿ ಪಾಕಿಸ್ತಾನವನ್ನು ಮುನ್ನಡೆಸಲು ಪಿಸಿಬಿಯಿಂದ ಕರೆ ಬಂದ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೈದಾನದ ಹೊರಗೆ ಮತ್ತು ಮೈದಾನದ ಒಳಗೆ ಅನೇಕ ಏಳು ಬೀಳುಗಳನ್ನು ಕಂಡಿದ್ದೇನೆ. ಆದರೆ ತುಂಬು ಹೃದಯದಿಂದ ಕ್ರಿಕೆಟ್‌ ಜಗತ್ತಿನಲ್ಲಿ ಪಾಕಿಸ್ತಾನದ ಹೆಮ್ಮೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದ್ದೇನೆ” ಎಂದು ಬಾಬರ್‌ ಅಜಮ್‌ ಹೇಳಿಕೆ ನೀಡಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಬಾಬರ್‌ ಅಜಮ್‌ “ಇಂದು ನಾನು ಪಾಕಿಸ್ತಾನದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ ಆದರೆ ಈ ಕರೆಗೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಎಲ್ಲಾ ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸಲು ಸಿದ್ಧನಿದ್ದೇನೆ, ಈ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ. 

andolana

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

5 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

5 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

5 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

6 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

10 hours ago