BREAKING NEWS

ವಿಶ್ವಕಪ್‌ನಲ್ಲಿ ಪಾಕ್ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್‌ ಅಜಮ್‌

ಪ್ರಸ್ತುತ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿ ನಾಕ್‌ಔಟ್‌ ಹಂತ ತಲುಪಿದ್ದು, ಭಾರತ, ಸೌತ್‌ ಆಫ್ರಿಕಾ, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಸೆಮಿಫೈನಲ್‌ ತಲುಪಿವೆ. ಟೂರ್ನಿಯಲ್ಲಿ ಭಾಗವಹಿಸಿದ್ದ ಒಟ್ಟು ಹತ್ತು ತಂಡಗಳ ಪೈಕಿ ಈ 4 ತಂಡಗಳು ಸೆಮೀಸ್ ತಲುಪಿದ್ದು ಉಳಿದ 6 ತಂಡಗಳು ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರಬಿದ್ದಿದ್ದವು.

ಇನ್ನು ಈ ಬಾರಿಯ ವಿಶ್ವಕಪ್‌ ಟೂರ್ನಿ ಆರಂಭವಾಗುವ ಮುನ್ನವೇ ಸೆಮಿಫೈನಲ್‌ ತಲುಪಬಹುದಾದ ತಂಡ ಎಂದು ಹಲವರಿಂದ ಊಹಿಸಲ್ಪಟ್ಟಿದ್ದ ಪಾಕಿಸ್ತಾನ ಲೀಗ್‌ ಹಂತದಲ್ಲಿಯೇ ಟೂರ್ನಿಯಿಂದ ಹೊರ ಬೀಳುವ ಮೂಲಕ ತೀವ್ರ ಮುಖಭಂಗಕ್ಕೆ ಒಳಗಾಗಿತ್ತು.

ಒಟ್ಟು 9 ಲೀಗ್‌ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಪಾಕಿಸ್ತಾನ ತಂಡ ಕೇವಲ 4 ಪಂದ್ಯಗಳಲ್ಲಿ ಮಾತ್ರ ಗೆದ್ದು ಸೆಮಿಫೈನಲ್‌ ಅರ್ಹತೆ ಪಡೆದುಕೊಳ್ಳಲಾಗದೇ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹೀಗೆ ಟೂರ್ನಿಯಲ್ಲಿ ತಂಡ ಕಳಪೆ ಪ್ರದರ್ಶನ ನೀಡಿದ ಬೆನ್ನಲ್ಲೇ ಪಾಕಿಸ್ತಾನ ತಂಡದ ನಾಯಕ ಬಾಬರ್‌ ಅಜಮ್‌ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಪಾಕಿಸ್ತಾನ ತಂಡವನ್ನು ಎಲ್ಲಾ ಮೂರೂ ಮಾದರಿಯಲ್ಲಿಯೂ ಮುನ್ನಡೆಸುತ್ತಿದ್ದ ಬಾಬರ್‌ ಅಜಮ್‌ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ್ದು ಎಲ್ಲಾ ಮಾದರಿಯಲ್ಲಿಯೂ ಆಟಗಾರನಾಗಿ ಕಣಕ್ಕಿಳಿಯುವುದಾಗಿ ಹೇಳಿಕೆ ನೀಡಿದ್ದಾರೆ.

ರಾಜೀನಾಮೆ ಘೋಷಿಸುವ ಸಮಯದಲ್ಲಿ ಮಾತಾನಾಡಿರುವ ಬಾಬರ್‌ ಅಜಮ್‌ “2019ರಲ್ಲಿ ಪಾಕಿಸ್ತಾನವನ್ನು ಮುನ್ನಡೆಸಲು ಪಿಸಿಬಿಯಿಂದ ಕರೆ ಬಂದ ಕ್ಷಣವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಮೈದಾನದ ಹೊರಗೆ ಮತ್ತು ಮೈದಾನದ ಒಳಗೆ ಅನೇಕ ಏಳು ಬೀಳುಗಳನ್ನು ಕಂಡಿದ್ದೇನೆ. ಆದರೆ ತುಂಬು ಹೃದಯದಿಂದ ಕ್ರಿಕೆಟ್‌ ಜಗತ್ತಿನಲ್ಲಿ ಪಾಕಿಸ್ತಾನದ ಹೆಮ್ಮೆ ಮತ್ತು ಗೌರವವನ್ನು ಕಾಪಾಡಿಕೊಳ್ಳುವ ಗುರಿಯನ್ನು ಹೊಂದಿದ್ದೇನೆ” ಎಂದು ಬಾಬರ್‌ ಅಜಮ್‌ ಹೇಳಿಕೆ ನೀಡಿದ್ದಾರೆ.

ಇನ್ನೂ ಮುಂದುವರಿದು ಮಾತನಾಡಿದ ಬಾಬರ್‌ ಅಜಮ್‌ “ಇಂದು ನಾನು ಪಾಕಿಸ್ತಾನದ ಎಲ್ಲಾ ಮಾದರಿಯ ನಾಯಕತ್ವದಿಂದ ಕೆಳಗಿಳಿಯುತ್ತಿದ್ದೇನೆ. ಇದು ಕಠಿಣ ನಿರ್ಧಾರ ಆದರೆ ಈ ಕರೆಗೆ ಇದು ಸರಿಯಾದ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಎಲ್ಲಾ ಮೂರು ಮಾದರಿಗಳಲ್ಲಿ ಆಟಗಾರನಾಗಿ ಪಾಕಿಸ್ತಾನವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ. ನನ್ನ ಅನುಭವ ಮತ್ತು ಸಮರ್ಪಣೆಯೊಂದಿಗೆ ಹೊಸ ನಾಯಕ ಮತ್ತು ತಂಡವನ್ನು ಬೆಂಬಲಿಸಲು ಸಿದ್ಧನಿದ್ದೇನೆ, ಈ ಮಹತ್ವದ ಜವಾಬ್ದಾರಿಯನ್ನು ನನಗೆ ವಹಿಸಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ನನ್ನ ಪ್ರಾಮಾಣಿಕ ಧನ್ಯವಾದಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ. 

andolana

Recent Posts

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

1 hour ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

2 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

3 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

4 hours ago

ಹಾಡುಪಾಡು | ಯರಕನಗದ್ದೆ ಪೋಡಿನಲ್ಲಿ ವೋಟು ಕಾರ್ಡಿನ ಪರದಾಟ

ಜಯಶಂಕರ್ ನಾನು ಶಾಲೆಯ ಅಂಗಳದಲ್ಲಿ ಕುಳಿತುಕೊಂಡು ಮಕ್ಕಳಿಗೆ ಪಾಠ ಹೇಳಿಕೊಡುತ್ತಿರುವಂತಹ ಸಂದರ್ಭದಲ್ಲಿ ನಾಲ್ಕಾರು ಸೋಲಿಗರು ಗುಂಪಿನಲ್ಲಿ ಏನೇನೋ ಗೊಣಗಾಡಿಕೊಂಡು ಹೋಗುತ್ತಿದ್ದರು.…

4 hours ago