BREAKING NEWS

ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಪ್ರಸ್ತಾಪ ‘ಕೈ’ ನಾಯಕರಲ್ಲೇ ಗೊಂದಲ : ನಿಷೇಧ ಕೈಬಿಡುವಂತೆ ಹಲವರಿಂದ ಒತ್ತಾಯ

ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್​ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವುದಕ್ಕೆ ಕಾಂಗ್ರೆಸ್​ನ ಕೆಲ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಪ್ರಣಾಳಿಕೆ ಸಿದ್ಧಪಡಿಸುವ ವೇಳೆ ನಮ್ಮ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಮ್ಮ ಸಲಹೆಗಳನ್ನು ಸ್ವೀಕರಿಸದೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಇದು ಚುನಾವಣೆಯ ಹೊತ್ತಿನಲ್ಲಿ ಬಿಜೆಪಿಗೆ ಲಾಭ ಮಾಡಿಕೊಟ್ಟಂತಾಗಿದೆ. ಕೆಲವು ಸೂಕ್ಷ್ಮ ವಿಚಾರಗಳನ್ನು ಗಮನಿಸದೆ ಪ್ರಣಾಳಿಕೆ ಸಿದ್ಧಪಡಿಸಿದರೆ ಇಂತಹ ಎಡವಟ್ಟು ಆಗುತ್ತದೆ ಎಂದು ಕೆಲ ಕಾಂಗ್ರೆಸ್​ನ ಹಿರಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಜರಂಗದಳ ಬ್ಯಾನ್ ವಿಚಾರ ‘ಕೈ’ ನಾಯಕರಲ್ಲೇ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ನಿಷೇಧ ಕೈಬಿಡಬೇಕೋ, ಉಳಿಸಿಕೊಳ್ಳಬೇಕೋ ಎಂಬ ಗೊಂದಲ ಇದೀಗ ಕಾಂಗ್ರೆಸ್ ವಲಯದಲ್ಲಿ ಏರ್ಪಟ್ಟಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ನಿಷೇಧ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ ಇನ್ನು ಕೆಲ ನಾಯಕರು ಯಾವುದೇ ಕಾರಣಕ್ಕೂ ಪ್ರಣಾಳಿಕೆಯಲ್ಲಿ ತಿಳಿಸಿದ್ದ ಭರವಸೆಯನ್ನು ಕೈಬಿಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ವಿವಾದವನ್ನು ಸಮರ್ಥವಾಗಿ ಎದುರಿಸೋಣ : ಒಂದು ವೇಳೆ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿರುವುದನ್ನು ಹಿಂತೆಗೆದರೆ ಬಿಜೆಪಿ ಶರಣಾದಂತೆ ಆಗುತ್ತದೆ. ತಪ್ಪು ಮಾಡಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದೇವೆ ಎಂಬ ಸಂದೇಶ ರಾಜ್ಯದ ಜನತೆಗೆ ರವಾನೆಯಾಗಲಿದೆ. ಹೀಗಾಗಿ ಸದ್ಯ ವಿವಾದಕ್ಕೆ ಕಾರಣವಾಗಿರುವ ವಿಚಾರವನ್ನು ಸಮರ್ಥವಾಗಿ ಎದುರಿಸೋಣ ಎಂದು ಕೆಲ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

lokesh

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

6 hours ago