ಬೆಂಗಳೂರು : ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪವಾಗುತ್ತಿದ್ದಂತೆ ಹಿಂದೂಪರ ಸಂಘಟನೆಗಳು ಸಿಡಿದೆದ್ದಿವೆ. ರಾಜ್ಯದ ಬಹುತೇಕ ಕಡೆಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದು ಚುನಾವಣೆಯ ದೃಷ್ಟಿಯಿಂದ ಕಾಂಗ್ರೆಸ್ಗೆ ಹಿನ್ನೆಡೆ ಆಗಬಹುದು ಎಂದು ರಾಜಕೀಯ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಇದೀಗ ಬಜರಂಗದಳ ನಿಷೇಧ ಮಾಡುತ್ತೇವೆ ಎಂದಿರುವುದಕ್ಕೆ ಕಾಂಗ್ರೆಸ್ನ ಕೆಲ ಹಿರಿಯ ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.
ಪ್ರಣಾಳಿಕೆ ಸಿದ್ಧಪಡಿಸುವ ವೇಳೆ ನಮ್ಮ ಅಭಿಪ್ರಾಯ ಸಂಗ್ರಹಿಸಬೇಕಿತ್ತು. ನಮ್ಮ ಸಲಹೆಗಳನ್ನು ಸ್ವೀಕರಿಸದೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ಇದು ಚುನಾವಣೆಯ ಹೊತ್ತಿನಲ್ಲಿ ಬಿಜೆಪಿಗೆ ಲಾಭ ಮಾಡಿಕೊಟ್ಟಂತಾಗಿದೆ. ಕೆಲವು ಸೂಕ್ಷ್ಮ ವಿಚಾರಗಳನ್ನು ಗಮನಿಸದೆ ಪ್ರಣಾಳಿಕೆ ಸಿದ್ಧಪಡಿಸಿದರೆ ಇಂತಹ ಎಡವಟ್ಟು ಆಗುತ್ತದೆ ಎಂದು ಕೆಲ ಕಾಂಗ್ರೆಸ್ನ ಹಿರಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಜರಂಗದಳ ಬ್ಯಾನ್ ವಿಚಾರ ‘ಕೈ’ ನಾಯಕರಲ್ಲೇ ಅಸಮಾಧಾನ ಉಂಟಾಗಿರುವ ಹಿನ್ನೆಲೆ, ನಿಷೇಧ ಕೈಬಿಡಬೇಕೋ, ಉಳಿಸಿಕೊಳ್ಳಬೇಕೋ ಎಂಬ ಗೊಂದಲ ಇದೀಗ ಕಾಂಗ್ರೆಸ್ ವಲಯದಲ್ಲಿ ಏರ್ಪಟ್ಟಿದೆ. ಕೆಲ ಕಾಂಗ್ರೆಸ್ ಹಿರಿಯ ನಾಯಕರು ನಿಷೇಧ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ ಇನ್ನು ಕೆಲ ನಾಯಕರು ಯಾವುದೇ ಕಾರಣಕ್ಕೂ ಪ್ರಣಾಳಿಕೆಯಲ್ಲಿ ತಿಳಿಸಿದ್ದ ಭರವಸೆಯನ್ನು ಕೈಬಿಡಬಾರದು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ವಿವಾದವನ್ನು ಸಮರ್ಥವಾಗಿ ಎದುರಿಸೋಣ : ಒಂದು ವೇಳೆ ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿರುವುದನ್ನು ಹಿಂತೆಗೆದರೆ ಬಿಜೆಪಿ ಶರಣಾದಂತೆ ಆಗುತ್ತದೆ. ತಪ್ಪು ಮಾಡಿದ್ದೇವೆ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದೇವೆ ಎಂಬ ಸಂದೇಶ ರಾಜ್ಯದ ಜನತೆಗೆ ರವಾನೆಯಾಗಲಿದೆ. ಹೀಗಾಗಿ ಸದ್ಯ ವಿವಾದಕ್ಕೆ ಕಾರಣವಾಗಿರುವ ವಿಚಾರವನ್ನು ಸಮರ್ಥವಾಗಿ ಎದುರಿಸೋಣ ಎಂದು ಕೆಲ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…