BREAKING NEWS

ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.

andolanait

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago