ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.
ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್ಎಫ್ಓ ರತ್ನಾಕರ್, ಡಿಆರ್ಎಫ್ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.
ಛತ್ತೀಸ್ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…
ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್ಲೈನ್ ಡೆಲಿವರಿ ಬಾಯ್ಸ್ ವೇಷದಲ್ಲಿ…
ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…
ಬಾಗಲಕೋಟೆ: ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ಎನ್ಐಎಗೆ ವಹಿಸುವಂತೆ ಕೇಂದ್ರ…
ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ…
ಹಾಸನ: ಕೆಎಸ್ಆರ್ಟಿಸಿ ಬಸ್ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ…