BREAKING NEWS

ದಸರಾ ಜಂಬೂ ಸವಾರಿಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಇನ್ನಿಲ್ಲ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ. ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.

ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಟಿ.ಬಿ.(ಕ್ಷಯ) ಇರಬಹುದೆಂದು ವೈದ್ಯರು ಶಂಕಿಸಿದ್ದರು., ವೈದ್ಯಕೀಯ ವರದಿ ಬಂದ ನಂತರವಷ್ಟೆ ಕಾಯಿಲೆ ಕುರಿತು ನಿಖರವಾಗಿ ತಿಳಿಯಲಿದೆ.

ಸ್ಥಳದಲ್ಲೇ ಬೀಡು ಬಿಟ್ಟಿದ್ದರು
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು. ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್‌ಎಫ್‌ಓ ರತ್ನಾಕರ್, ಡಿಆರ್‌ಎಫ್‌ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

1 hour ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

1 hour ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

1 hour ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

15 hours ago