BREAKING NEWS

14 ಬಾರಿ ಅಂಬಾರಿ ಹೊತ್ತ ‘ಬಲರಾಮ’ ಅಸ್ವಸ್ಥ

ಹುಣಸೂರು : ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿರುವ ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಸುಮಾರು 67 ವರ್ಷದ ಬಲರಾಮನಿಗೆ ಹತ್ತು ದಿನಗಳಿಂದ ಬಾಯಿಯಲ್ಲಿಹುಣ್ಣಾಗಿ ನಿತ್ರಾಣಗೊಂಡಿದೆ. ಇದು ಟಿಬಿ ಇರಬಹುದೆಂದು ಶಂಕಿಸಲಾಗಿದೆ. ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್‌ ಸ್ಥಳದಲ್ಲೇ ಠಿಕಾಣಿ ಹೂಡಿ ಚಿಕಿತ್ಸೆ ನೀಡುತ್ತಿದ್ದಾರೆ.

ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್‌ ಚಿಕ್ಕನರಗುಂದ ಮಾರ್ಗದರ್ಶನದಲ್ಲಿಆರ್‌ಎಫ್‌ಒ ರತ್ನಾಕರ್‌, ಡಿಆರ್‌ಎಫ್‌ಒ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ ಹಾಗೂ ಸಿಬ್ಬಂದಿ ಸ್ಥಳದಲ್ಲೇ ಇದ್ದು, ಬಲರಾಮನ ಆರೈಕೆಯಲ್ಲಿತೊಡಗಿಸಿಕೊಂಡಿದ್ದಾರೆ.

ಎಂಡೋಸ್ಕೋಪಿ : ತೀವ್ರ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪಶು ವೈದ್ಯ ಡಾ.ಚೆಟ್ಟಿಯಪ್ಪ, ಡಾ.ಮದನ್‌, ಡಾ.ರಮೇಶ್‌ ತಂಡ ಬುಧವಾರ ಪರಿಶೀಲಿಸಿತು. ಅಲ್ಲದೇ ಮೈಸೂರು ಅರಮನೆ ರಾಜವಂಶಸ್ಥ ಶೃತಿ ಕೀರ್ತಿದೇವಿ ಅವರ ನೆರವಿನಿಂದ ಪೋರ್ಟಬಲ್‌ ಯಂತ್ರದ ಮೂಲಕ ಎಂಡೋಸ್ಕೋಪಿ ಮಾಡಲಾಗಿದೆ. ಗುರುವಾರ ವರದಿ ಬರಲಿದ್ದು, ನೈಜ ಕಾಯಿಲೆ ಏನೆಂದು ತಿಳಿಯಬಹುದು ಎಂದು ಪಶು ವೈದ್ಯರು ತಿಳಿಸಿದ್ದಾರೆ.

ಪಶುವೈದ್ಯರು ಏನಂತಾರೆ ? : ಬಲರಾಮ ಹತ್ತು ದಿನಗಳಿಂದ ತೀವ್ರ ಅಸ್ವಸ್ಥಗೊಂಡಿದ್ದು, ಪಶು ವೈದ್ಯರು ತೀವ್ರ ನಿಗಾವಹಿಸಿದ್ದು, ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ಚೇತರಿಸಿಕೊಳ್ಳುತ್ತಿದೆ. ಗಟ್ಟಿ ಆಹಾರ ಸೇವಿಸಲಾಗದ ಬಲರಾಮನಿಗೆ ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆ ಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರ ನೀಡಲಾಗುತ್ತಿದೆ. ಎಂಡೋಸ್ಕೋಪಿ ಸಹ ಮಾಡಲಾಗಿದ್ದು, ಲ್ಯಾಬ್‌ನಿಂದ ವರದಿ ಬಂದ ನಂತರ ಕಾಯಿಲೆ ತಿಳಿದು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

1 hour ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

10 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

10 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

10 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago