BREAKING NEWS

14 ಬಾರಿ ಅಂಬಾರಿ ಹೊತ್ತ ‘ಬಲರಾಮ’ ಅಸ್ವಸ್ಥ

ಹುಣಸೂರು : ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿರುವ ಬಲರಾಮ ತೀವ್ರ ಅಸ್ವಸ್ಥಗೊಂಡಿದ್ದು, ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.

ಸುಮಾರು 67 ವರ್ಷದ ಬಲರಾಮನಿಗೆ ಹತ್ತು ದಿನಗಳಿಂದ ಬಾಯಿಯಲ್ಲಿಹುಣ್ಣಾಗಿ ನಿತ್ರಾಣಗೊಂಡಿದೆ. ಇದು ಟಿಬಿ ಇರಬಹುದೆಂದು ಶಂಕಿಸಲಾಗಿದೆ. ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್‌ ಸ್ಥಳದಲ್ಲೇ ಠಿಕಾಣಿ ಹೂಡಿ ಚಿಕಿತ್ಸೆ ನೀಡುತ್ತಿದ್ದಾರೆ.

ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್‌ ಚಿಕ್ಕನರಗುಂದ ಮಾರ್ಗದರ್ಶನದಲ್ಲಿಆರ್‌ಎಫ್‌ಒ ರತ್ನಾಕರ್‌, ಡಿಆರ್‌ಎಫ್‌ಒ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕಾವಾಡಿ ಮಂಜನಾಥ ಹಾಗೂ ಸಿಬ್ಬಂದಿ ಸ್ಥಳದಲ್ಲೇ ಇದ್ದು, ಬಲರಾಮನ ಆರೈಕೆಯಲ್ಲಿತೊಡಗಿಸಿಕೊಂಡಿದ್ದಾರೆ.

ಎಂಡೋಸ್ಕೋಪಿ : ತೀವ್ರ ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪಶು ವೈದ್ಯ ಡಾ.ಚೆಟ್ಟಿಯಪ್ಪ, ಡಾ.ಮದನ್‌, ಡಾ.ರಮೇಶ್‌ ತಂಡ ಬುಧವಾರ ಪರಿಶೀಲಿಸಿತು. ಅಲ್ಲದೇ ಮೈಸೂರು ಅರಮನೆ ರಾಜವಂಶಸ್ಥ ಶೃತಿ ಕೀರ್ತಿದೇವಿ ಅವರ ನೆರವಿನಿಂದ ಪೋರ್ಟಬಲ್‌ ಯಂತ್ರದ ಮೂಲಕ ಎಂಡೋಸ್ಕೋಪಿ ಮಾಡಲಾಗಿದೆ. ಗುರುವಾರ ವರದಿ ಬರಲಿದ್ದು, ನೈಜ ಕಾಯಿಲೆ ಏನೆಂದು ತಿಳಿಯಬಹುದು ಎಂದು ಪಶು ವೈದ್ಯರು ತಿಳಿಸಿದ್ದಾರೆ.

ಪಶುವೈದ್ಯರು ಏನಂತಾರೆ ? : ಬಲರಾಮ ಹತ್ತು ದಿನಗಳಿಂದ ತೀವ್ರ ಅಸ್ವಸ್ಥಗೊಂಡಿದ್ದು, ಪಶು ವೈದ್ಯರು ತೀವ್ರ ನಿಗಾವಹಿಸಿದ್ದು, ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಆನೆ ಚೇತರಿಸಿಕೊಳ್ಳುತ್ತಿದೆ. ಗಟ್ಟಿ ಆಹಾರ ಸೇವಿಸಲಾಗದ ಬಲರಾಮನಿಗೆ ರಾಗಿ ಗಂಜಿ, ರಾಗಿ ಹಿಟ್ಟು, ಬಾಳೆ ಹಣ್ಣು, ಕಲ್ಲಂಗಡಿ ಹಣ್ಣಿನಂತಹ ಮೆದು ಆಹಾರ ನೀಡಲಾಗುತ್ತಿದೆ. ಎಂಡೋಸ್ಕೋಪಿ ಸಹ ಮಾಡಲಾಗಿದ್ದು, ಲ್ಯಾಬ್‌ನಿಂದ ವರದಿ ಬಂದ ನಂತರ ಕಾಯಿಲೆ ತಿಳಿದು ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.

lokesh

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago