BREAKING NEWS

ರಾಮ ಮಂದಿರ ಥೀಮ್‌ನ ಬನಾರಸ್‌ ಸೀರೆಗೆ ವಿದೇಶದಲ್ಲೂ ಬೇಡಿಕೆ!

ಅಯೋಧ್ಯೆ: ರಾಮಮಂದಿರ ಥೀಮ್‌ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ.

ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಸೀರೆಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಲೋಹ್ತಾ ಕೊರುಟಾದ ನಿವಾಸಿ ಸರ್ವೇಶ್ ಕುಮಾರ್ ಶ್ರೀವಾಸ್ತವ ಅವರು ಈ ಬನಾರಸಿ ಸೀರೆಗಳನ್ನು ವಿಶೇಷ ನೇಯ್ಗೆ ಕಲೆಯೊಂದಿಗೆ ಸಿದ್ಧಪಡಿಸುತ್ತಿದ್ದಾರೆ. ಸರ್ವೇಶ್ ಪ್ರಕಾರ, ಪ್ರಸ್ತುತ ಈ ಸೀರೆಗಳಿಗೆ ಬೇಡಿಕೆ ಹೆಚ್ಚಾಗಿದೆ.

ಇಟಲಿ, ಸಿಂಗಾಪುರ ಹೊರತುಪಡಿಸಿ ಗುಜರಾತ್, ಮಹಾರಾಷ್ಟ್ರ, ಬೆಂಗಳೂರು ಹಾಗೂ ಚೆನ್ನೈನಿಂದ ವಿಶೇಷ ಆರ್ಡರ್‌ಗಳು ಬಂದಿವೆ. ಇತ್ತೀಚೆಗಷ್ಟೇ ಅವರು ರಾಮಮಂದಿರ ವಿನ್ಯಾಸವಿರುವ ಸೀರೆಯನ್ನು ಇಟಲಿಗೆ ಕಳುಹಿಸಿದ್ದಾರೆ.

ಈ ಬನಾರಸಿ ಸೀರೆಯಲ್ಲಿ ರಾಮಮಂದಿರ ಹಾಗೂ ಸೀರೆಯ ಕೊನೆಯಲ್ಲಿ ಸರಯೂ ವಿನ್ಯಾಸವನ್ನು ಮಾಡಲಾಗಿದೆ. ಪ್ಯೂರ್ ರೇಷ್ಮೆಯಿಂದ ಮಾಡಿದ ಸೀರೆಯ ಸಂಪೂರ್ಣ ಕೆಲಸವನ್ನು ಕೈಮಗ್ಗದಲ್ಲಿ ಮಾತ್ರ ತಯಾರಿಸಲಾಗುತ್ತದೆ.

ಇದನ್ನು ತಯಾರಿಸಲು ಎರಡು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ. 18 ಮಂದಿ ಕುಶಲಕರ್ಮಿಗಳು ಒಂದು ಸೀರೆಯನ್ನು ಸಿದ್ಧಪಡಿಸುತ್ತಾರೆ.

ಒಂದು ಸೀರೆಯ ಬೆಲೆ 35 ಸಾವಿರ ರೂಪಾಯಿಗಳಿವೆ. ಸೀರೆಯಂತೆ ದುಪ್ಪಟ್ಟಾಗಳನ್ನು ಕೂಡ ಮಾಡಿದ್ದಾರೆ. ದುಪ್ಪಟ್ಟಾದ ಎರಡೂ ಬದಿಯಲ್ಲಿ ರಾಮಮಂದಿರದ ವಿನ್ಯಾಸವನ್ನು ಮಾಡಿದ್ದಾರೆ.

ಒಂದು ದುಪ್ಪಟ್ಟಾ ಬೆಲೆ 50 ಸಾವಿರ ರೂಪಾಯಿ ಇದ್ದು, ಇದನ್ನು ತಯಾರಿಸಲು ಮೂರು ತಿಂಗಳು ಬೇಕಾಗುತ್ತದೆ ಎಂದು ಸರ್ವೇಶ್ ಹೇಳಿದರು.

andolanait

Recent Posts

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

5 mins ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

12 mins ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

16 mins ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

19 mins ago

ಕೈಗಾರಿಕೆ ಸ್ಥಾಪನೆಗೆ 500 ಎಕರೆ ಜಾಗ ಕೊಡುತ್ತೇನೆ : ಎಚ್‌ಡಿಕೆ ಯಾವ ಕೈಗಾರಿಕೆ ತರುತ್ತಾರೋ ತರಲಿ : ಶಾಸಕ ನರೇಂದ್ರಸ್ವಾಮಿ ಸವಾಲು

ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…

21 mins ago

ಮೈಸೂರಿನಲ್ಲಿ ಅಂಡರ್ ಗ್ರೌಂಡ್ ವಿದ್ಯುತ್ ಕೇಬಲ್ ಅಳವಡಿಕೆ ಪ್ರಗತಿ : 1,100 ಕಿ.ಮೀ ವರೆಗೆ ಕೇಬಲ್ ಅಳವಡಿಕೆ

ಮೈಸೂರು : ನಗರದಲ್ಲಿ ಓವ‌ರ್ ಹೆಡ್ (ಮೇಲ್ಬಾಗದ) ವಿದ್ಯುತ್ ಮಾರ್ಗವನ್ನು ತೆರವು ಮಾಡಿ ವಿದೇಶಿ ಮಾದರಿಯಲ್ಲಿ ಭೂಗತಕೇಬಲ್‌ಗಳಾಗಿ ಪರಿವರ್ತಿಸುವ 408…

29 mins ago