ಅಯೋಧ್ಯೆ: ರಾಮಮಂದಿರ ಥೀಮ್ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ.
ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಸೀರೆಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ಲೋಹ್ತಾ ಕೊರುಟಾದ ನಿವಾಸಿ ಸರ್ವೇಶ್ ಕುಮಾರ್ ಶ್ರೀವಾಸ್ತವ ಅವರು ಈ ಬನಾರಸಿ ಸೀರೆಗಳನ್ನು ವಿಶೇಷ ನೇಯ್ಗೆ ಕಲೆಯೊಂದಿಗೆ ಸಿದ್ಧಪಡಿಸುತ್ತಿದ್ದಾರೆ. ಸರ್ವೇಶ್ ಪ್ರಕಾರ, ಪ್ರಸ್ತುತ ಈ ಸೀರೆಗಳಿಗೆ ಬೇಡಿಕೆ ಹೆಚ್ಚಾಗಿದೆ.
ಇಟಲಿ, ಸಿಂಗಾಪುರ ಹೊರತುಪಡಿಸಿ ಗುಜರಾತ್, ಮಹಾರಾಷ್ಟ್ರ, ಬೆಂಗಳೂರು ಹಾಗೂ ಚೆನ್ನೈನಿಂದ ವಿಶೇಷ ಆರ್ಡರ್ಗಳು ಬಂದಿವೆ. ಇತ್ತೀಚೆಗಷ್ಟೇ ಅವರು ರಾಮಮಂದಿರ ವಿನ್ಯಾಸವಿರುವ ಸೀರೆಯನ್ನು ಇಟಲಿಗೆ ಕಳುಹಿಸಿದ್ದಾರೆ.
ಈ ಬನಾರಸಿ ಸೀರೆಯಲ್ಲಿ ರಾಮಮಂದಿರ ಹಾಗೂ ಸೀರೆಯ ಕೊನೆಯಲ್ಲಿ ಸರಯೂ ವಿನ್ಯಾಸವನ್ನು ಮಾಡಲಾಗಿದೆ. ಪ್ಯೂರ್ ರೇಷ್ಮೆಯಿಂದ ಮಾಡಿದ ಸೀರೆಯ ಸಂಪೂರ್ಣ ಕೆಲಸವನ್ನು ಕೈಮಗ್ಗದಲ್ಲಿ ಮಾತ್ರ ತಯಾರಿಸಲಾಗುತ್ತದೆ.
ಇದನ್ನು ತಯಾರಿಸಲು ಎರಡು ತಿಂಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಲಾಗುತ್ತಿದೆ. 18 ಮಂದಿ ಕುಶಲಕರ್ಮಿಗಳು ಒಂದು ಸೀರೆಯನ್ನು ಸಿದ್ಧಪಡಿಸುತ್ತಾರೆ.
ಒಂದು ಸೀರೆಯ ಬೆಲೆ 35 ಸಾವಿರ ರೂಪಾಯಿಗಳಿವೆ. ಸೀರೆಯಂತೆ ದುಪ್ಪಟ್ಟಾಗಳನ್ನು ಕೂಡ ಮಾಡಿದ್ದಾರೆ. ದುಪ್ಪಟ್ಟಾದ ಎರಡೂ ಬದಿಯಲ್ಲಿ ರಾಮಮಂದಿರದ ವಿನ್ಯಾಸವನ್ನು ಮಾಡಿದ್ದಾರೆ.
ಒಂದು ದುಪ್ಪಟ್ಟಾ ಬೆಲೆ 50 ಸಾವಿರ ರೂಪಾಯಿ ಇದ್ದು, ಇದನ್ನು ತಯಾರಿಸಲು ಮೂರು ತಿಂಗಳು ಬೇಕಾಗುತ್ತದೆ ಎಂದು ಸರ್ವೇಶ್ ಹೇಳಿದರು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…