BREAKING NEWS

ಬಂದ್ ಬಿಸಿ : ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದು

ಬೆಂಗಳೂರು : ಕಾವೇರಿ ಉಳಿವಿಗಾಗಿ ಬೆಂಗಳೂರು ಗ್ರಾಮಾಂತರ-ಬೆಂಗಳೂರು ಬಂದ್‍ನ ಪರಿಣಾಮ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಪರಿಣಾಮ ಬೀರಿದೆ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಪ್ರಯಾಣಿಕರು ಬೆಂಗಳೂರು ಪ್ರಯಾಣ ರದ್ದು ಮಾಡಿರುವ ಹಿನ್ನೆಲೆಯಲ್ಲಿ 13 ದೇಶೀಯ ವಿಮಾನಗಳ ಆಗಮನ ಕೊನೆ ಕ್ಷಣದಲ್ಲಿ ರದ್ದಾಗಿದೆ. ದೆಹಲಿ, ಕೊಚ್ಚಿ, ಮಂಗಳೂರು, ಮುಂಬೈ ಸೇರಿದಂತೆ ಇತರೆ 13 ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ ನವರು ಕೊನೆ ಕ್ಷಣದಲ್ಲಿ ರದ್ದು ಮಾಡಿದ್ದಾರೆ.

ಹೀಗಾಗಿ ಸಹಜವಾಗಿ ಏರ್‌ಪೋರ್ಟ್‌ ನಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದ್ದು, ಪರೋಕ್ಷವಾಗಿ ಇದು ಕ್ಯಾಬ್ ಚಾಲಕರ ಮೇಲೂ ಪರಿಣಾಮ ಬೀರಿದೆ. ಪ್ರಯಾಣಿಕರಿಗಾಗಿ ಕ್ಯಾಬ್ ಚಾಲಕರು ಗಂಟೆಗಟ್ಟಲೆ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

ಇತ್ತ ಏರ್‌ಪೋರ್ಟ್‌ಗೆ ಆಗಮಿಸುವ ಹಾಗೂ ನಿರ್ಗಮಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಕೊಂಚ ಕಡಿಮೆಯಾಗಿದೆ. ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಬೆಂಗಳೂರಿಗೆ ಬರುವವರ ಸಂಖ್ಯೆಯಲ್ಲಿ ಕಡಿತಗೊಂಡಿದೆ. ಏರ್‌ಪೋರ್ಟ್‌ ನಿಂದ ಬೇರೆ ಕಡೆಗೆ ತೆರಳುವವರ ಸಂಖ್ಯೆಯಲ್ಲಿ ಅಲ್ಪ ಪ್ರಮಾಣದ ಇಳಿಕೆಯಾಗಿದ್ದು, ಕ್ಯಾಬ್ ಚಾಲಕರ ಮೇಲೆ ಪರಿಣಾಮ ಬೀರಿದೆ.

ಸಹಜವಾಗಿ ಏರ್‌ಪೋರ್ಟ್‌ ನ ಟರ್ಮಿನಲ್ 1 ರಲ್ಲಿ ದೇಶದ ಇತರೆ ಭಾಗಗಳಿಂದ ಬರುವ ಪ್ರಯಾಣಿಕರ ಸಂಖ್ಯೆ ಸರಾಸರಿ 27-24 ಸಾವಿರ ಇದ್ದು ಆದ್ರೆ ಇಂದು 25000 ಕ್ಕೆ ಇಳಿದಿದೆ. ಹೀಗಾಗಿ ಸಹಜವಾಗಿ ಕ್ಯಾಬ್ ಚಾಲಕರಿಗೆ ಇದು ಹಿನ್ನೆಡೆಯಾಗಿದ್ದು ಪ್ರಯಾಣಿಕರು ಬಾರದೆ ಪ್ರಯಾಣಿಕರಿಗಾಗಿ ಕ್ಯಾಬ್ ಚಾಲಕರು ಕಾಯುವಂತಾಗಿದೆ.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago