ಗುಂಡ್ಲುಪೇಟೆ: ಲಾರಿಯೊಂದು ಡಿಕ್ಕಿ ಹೊಡೆದು ಭಾರೀ ಗಾತ್ರದ ಹೆಣ್ಣಾನೆ ಮೃತಪಟ್ಟ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮದ್ದೂರು ವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ತಮಿಳುನಾಡು ಮೂಲದ ಲಾರಿಯೊಂದು ಮೈಸೂರು ಕಡೆ ಬರುವಾಗ ಅಡ್ಡ ಬಂದ ಸುಮಾರು ೩೫ ವರ್ಷದ ಆನೆಗೆ ಡಿಕ್ಕಿ ಹೊಡೆದಿದೆ. ಇದರ ರಭಸಕ್ಕೆ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿದೆ. ಈ ರೀತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಡಾನೆ ಮೃತಪಟ್ಟಿರುವುದು ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು. ತಮಿಳುನಾಡು ಮೂಲದ ಲಾರಿ ವಶಕ್ಕೆ ಪಡೆಯಲಾಗಿದೆ. ರಾತ್ರಿ ೯ಕ್ಕೆ ಗೇಟ್ ಬಂದಾಗುವ ಆತಂಕದಲ್ಲಿ ಚಾಲಕರು ಜೋರಾಗಿ ವಾಹನ ಓಡಿಸುವುದರಿಂದ ಇಂತಹ ಅನಾಹುತ ಆಗುತ್ತಿದ್ದು, ಅಲ್ಲಲ್ಲಿ ಸ್ಪೀಡ್ ಬ್ರೇಕರ್ ಅಳವಡಿಸುವ ಒತ್ತಾಯ ಕೇಳಿ ಬಂದಿದೆ.
ಘಟನೆ ಸಂಬಂಧ ಮೊಕದ್ದಮೆ ದಾಖಲಿಸಲಾಗುತ್ತಿದೆ. ಬುಧವಾರ ಮರಣೋತ್ತರ ಪರೀಕ್ಷೆ ನಡೆದು ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಬಂಡೀಪುರ ನಿರ್ದೇಶಕ ಡಾ.ಪಿ.ರಮೇಶಕುಮಾರ್ ಆಂದೋಲನಕ್ಕೆ ತಿಳಿಸಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…